ವಿಜ್ಞಾನ ತಂತ್ರಜ್ಞಾನ

ಒಂದೇ ವಾಟ್ಸ್​ಆ್ಯಪ್​ನಲ್ಲಿ ಅನೇಕ ಅಕೌಂಟ್ : ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ

ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.

ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

ಈ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್‌ನಲ್ಲಿ ಖಾಸಗಿ ಚಾಟ್‌ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.

lokesh

Share
Published by
lokesh

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

6 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

7 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago