ವಿಜ್ಞಾನ ತಂತ್ರಜ್ಞಾನ

ಒಂದೇ ವಾಟ್ಸ್​ಆ್ಯಪ್​ನಲ್ಲಿ ಅನೇಕ ಅಕೌಂಟ್ : ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ

ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.

ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

ಈ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್‌ನಲ್ಲಿ ಖಾಸಗಿ ಚಾಟ್‌ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.

lokesh

Share
Published by
lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago