ವಿಜ್ಞಾನ ತಂತ್ರಜ್ಞಾನ

ಆನ್‌ಲೈನ್ RTI ಪೋರ್ಟಲ್ ಆರಂಭಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಆನ್‌ಲೈನ್ ಆರ್‌ಟಿಐ ಪೋರ್ಟಲ್ ಇನ್ನು ಕೆಲ ಹೊತ್ತಿನಲ್ಲಿ ಸಕ್ರಿಯವಾಗಲಿದೆ ಎಂದು ಘೋಷಿಸಿದರು. ತಾತ್ಕಾಲಿಕ ಸಮಸ್ಯೆಗಳಿದ್ದಲ್ಲಿ ನಾವು ಅದನ್ನು ಪರಿಶೀಲಿಸಿ ಸರಿಪಡಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ಕಳೆದ ಮಂಗಳವಾರ ಪೋರ್ಟಲ್‌ನ ಪರೀಕ್ಷಾರ್ಥ ಆವೃತ್ತಿಯನ್ನು ನ್ಯಾಯಾಲಯ ಸಕ್ರಿಯಗೊಳಿಸಿತ್ತು.

ಆರ್‌ಟಿಐ ಅರ್ಜಿ, ಪ್ರಥಮ ಮೇಲ್ಮನವಿಗಳನ್ನು ಸಲ್ಲಿಸಲು ಮತ್ತು ಪ್ರತಿ ಮಾಡಿಕೊಳ್ಳುವ ಶುಲ್ಕ, ಇತ್ಯಾದಿಗಳಿಗೆ ಪಾವತಿ ಮಾಡಲು ಇದನ್ನು ಬಳಸಬಹುದಾಗಿದ್ದು ಭಾರತೀಯ ನಾಗರಿಕರಿಗೆ ಮಾತ್ರ ಈ ಸಂಬಂಧ ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಅಥವಾ ಯುಪಿಐನ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.ಪ್ರತಿ ಆರ್‌ಟಿಐ ಅರ್ಜಿ ಶುಲ್ಕ ₹10.
ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಆರ್‌ಟಿಐ ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸಬೇಕಾಗಿತ್ತು.ನ್ಯಾಯಾಲಯಕ್ಕೆ ಆನ್‌ಲೈನ್‌ ಆರ್‌ಟಿಐ ಪೋರ್ಟಲ್‌ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಹಿಂದೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (ಪಿಐಎಲ್) ಸಲ್ಲಿಸಲಾಗಿತ್ತು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ ಶೀಘ್ರದಲ್ಲೇ ಪೋರ್ಟಲ್‌ಗೆ ಚಾಲನೆ ನೀಡಲಾಗುವುದು ಎಂದು ಹೇಳಿತ್ತು.

andolanait

Share
Published by
andolanait

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

41 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago