ವಿಜ್ಞಾನ ತಂತ್ರಜ್ಞಾನ

ಆನ್‌ಲೈನ್ RTI ಪೋರ್ಟಲ್ ಆರಂಭಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಆನ್‌ಲೈನ್ ಆರ್‌ಟಿಐ ಪೋರ್ಟಲ್ ಇನ್ನು ಕೆಲ ಹೊತ್ತಿನಲ್ಲಿ ಸಕ್ರಿಯವಾಗಲಿದೆ ಎಂದು ಘೋಷಿಸಿದರು. ತಾತ್ಕಾಲಿಕ ಸಮಸ್ಯೆಗಳಿದ್ದಲ್ಲಿ ನಾವು ಅದನ್ನು ಪರಿಶೀಲಿಸಿ ಸರಿಪಡಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ಕಳೆದ ಮಂಗಳವಾರ ಪೋರ್ಟಲ್‌ನ ಪರೀಕ್ಷಾರ್ಥ ಆವೃತ್ತಿಯನ್ನು ನ್ಯಾಯಾಲಯ ಸಕ್ರಿಯಗೊಳಿಸಿತ್ತು.

ಆರ್‌ಟಿಐ ಅರ್ಜಿ, ಪ್ರಥಮ ಮೇಲ್ಮನವಿಗಳನ್ನು ಸಲ್ಲಿಸಲು ಮತ್ತು ಪ್ರತಿ ಮಾಡಿಕೊಳ್ಳುವ ಶುಲ್ಕ, ಇತ್ಯಾದಿಗಳಿಗೆ ಪಾವತಿ ಮಾಡಲು ಇದನ್ನು ಬಳಸಬಹುದಾಗಿದ್ದು ಭಾರತೀಯ ನಾಗರಿಕರಿಗೆ ಮಾತ್ರ ಈ ಸಂಬಂಧ ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಅಥವಾ ಯುಪಿಐನ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.ಪ್ರತಿ ಆರ್‌ಟಿಐ ಅರ್ಜಿ ಶುಲ್ಕ ₹10.
ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಆರ್‌ಟಿಐ ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸಬೇಕಾಗಿತ್ತು.ನ್ಯಾಯಾಲಯಕ್ಕೆ ಆನ್‌ಲೈನ್‌ ಆರ್‌ಟಿಐ ಪೋರ್ಟಲ್‌ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಹಿಂದೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (ಪಿಐಎಲ್) ಸಲ್ಲಿಸಲಾಗಿತ್ತು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ ಶೀಘ್ರದಲ್ಲೇ ಪೋರ್ಟಲ್‌ಗೆ ಚಾಲನೆ ನೀಡಲಾಗುವುದು ಎಂದು ಹೇಳಿತ್ತು.

andolanait

Share
Published by
andolanait

Recent Posts

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

1 hour ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

3 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

5 hours ago