ವಿಜ್ಞಾನ ತಂತ್ರಜ್ಞಾನ

ಆನ್‌ಲೈನ್ RTI ಪೋರ್ಟಲ್ ಆರಂಭಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಆನ್‌ಲೈನ್ ಆರ್‌ಟಿಐ ಪೋರ್ಟಲ್ ಇನ್ನು ಕೆಲ ಹೊತ್ತಿನಲ್ಲಿ ಸಕ್ರಿಯವಾಗಲಿದೆ ಎಂದು ಘೋಷಿಸಿದರು. ತಾತ್ಕಾಲಿಕ ಸಮಸ್ಯೆಗಳಿದ್ದಲ್ಲಿ ನಾವು ಅದನ್ನು ಪರಿಶೀಲಿಸಿ ಸರಿಪಡಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ಕಳೆದ ಮಂಗಳವಾರ ಪೋರ್ಟಲ್‌ನ ಪರೀಕ್ಷಾರ್ಥ ಆವೃತ್ತಿಯನ್ನು ನ್ಯಾಯಾಲಯ ಸಕ್ರಿಯಗೊಳಿಸಿತ್ತು.

ಆರ್‌ಟಿಐ ಅರ್ಜಿ, ಪ್ರಥಮ ಮೇಲ್ಮನವಿಗಳನ್ನು ಸಲ್ಲಿಸಲು ಮತ್ತು ಪ್ರತಿ ಮಾಡಿಕೊಳ್ಳುವ ಶುಲ್ಕ, ಇತ್ಯಾದಿಗಳಿಗೆ ಪಾವತಿ ಮಾಡಲು ಇದನ್ನು ಬಳಸಬಹುದಾಗಿದ್ದು ಭಾರತೀಯ ನಾಗರಿಕರಿಗೆ ಮಾತ್ರ ಈ ಸಂಬಂಧ ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಅಥವಾ ಯುಪಿಐನ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.ಪ್ರತಿ ಆರ್‌ಟಿಐ ಅರ್ಜಿ ಶುಲ್ಕ ₹10.
ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಆರ್‌ಟಿಐ ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸಬೇಕಾಗಿತ್ತು.ನ್ಯಾಯಾಲಯಕ್ಕೆ ಆನ್‌ಲೈನ್‌ ಆರ್‌ಟಿಐ ಪೋರ್ಟಲ್‌ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಹಿಂದೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (ಪಿಐಎಲ್) ಸಲ್ಲಿಸಲಾಗಿತ್ತು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ ಶೀಘ್ರದಲ್ಲೇ ಪೋರ್ಟಲ್‌ಗೆ ಚಾಲನೆ ನೀಡಲಾಗುವುದು ಎಂದು ಹೇಳಿತ್ತು.

andolanait

Share
Published by
andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

35 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago