ವಿಜ್ಞಾನ ತಂತ್ರಜ್ಞಾನ

ಡಿಜಿಟಲ್ ಪೇಮೆಂಟ್ ಗಾಗಿ ಬಂತು ಸ್ಮಾರ್ಟ್ ರಿಂಗ್

ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ

ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು ಕೂಡ ಕರೆನ್ಸಿ ನೋಟುಗಳ ಮೂಲಕವೇ ನಡೆಯುತ್ತಿದ್ದವು. ಕ್ರಮೇಣ ಇದು ಎಟಿಎಂ ಕಾರ್ಡ್ ಆಗಿ ಬದಲಾಯಿತು ನಂತರ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪೇಟಿಎಂ, ಗೂಗಲ್ ಪೇ, ಫೋನ್ ಪೇ, ಆ್ಯಪ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಈ ಆ್ಯಪ್ ಗಳು ಮಾರುಕಟ್ಟೆಗೆ ಬಂದ ನಂತರ ಜನಗಳು ತಮ್ಮ ಕೆಲಸವನ್ನು ಸುಲಭವಾಗಿಸಿಕೊಳ್ಳಲು ಈ ತಂತ್ರಜ್ಞಾನ ಗಳನ್ನು ಬಳಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಬೆಳವಣಿಗೆಯಾಗಿ ಸ್ಮಾರ್ಟ್ ರಿಂಗನ್ನು ಬಿಡುಗಡೆ ಮಾಡುವ ಮೂಲಕ ತಂತ್ರಜ್ಞಾನ ಹೊಸ ಪಾವತಿ ವಿಧಾನವನ್ನು ಪರಿಚಯಿಸಿದೆ.

ಸಾಮಾನ್ಯವಾಗಿ ಎಲ್ಲರೂ ಕೂಡ ಕೈಗೆ ಉಂಗುರ ಹಾಕಿಕೊಳ್ಳುತ್ತಾರೆ. ಆದರೆ ಅದೇ ಉಂಗುರ ಇದೀಗ ಸ್ಮಾರ್ಟ್ ಟೂಲ್ ಆಗಿ ಬದಲಾಗಿದೆ. ಕೈಯಲ್ಲಿರುವ ಉಂಗುರದ ಮೂಲಕ ನಗದು ರಹಿತ ಪಾವತಿ ಮಾಡುವ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನು ಸ್ಮಾರ್ಟ್ ರಿಂಗ್ ಎಂದು ಕರೆಯಲಾಗುತ್ತದೆ. ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಹಾಗೂ ಪೇಟಿಎಂ, ಗೂಗಲ್ ಪೇ, ಫೋನ್ ಪೇ ಅಥವಾ ಫೋನ್ ಕರೆಗಳ ಅಗತ್ಯವಿಲ್ಲದೆ ಈ ರಿಂಗ್ ನಿಂದ ಪೇಮೆಂಟ್ ಮಾಡಬಹುದು.

ಈ ಸ್ಮಾರ್ಟ್ ರಿಂಗ್ ಅನ್ನು ಹಾಂಕಾಂಗ್ ಮೂಲದ ಟೊಪಿ ಎಂಬ ಕಂಪನಿ ಅಭಿವೃದ್ಧಿಪಡಿಸಿದೆ. ಈ ರಿಂಗ್ ಸ್ಮಾರ್ಟ್ ವಯರ್ಲೆಸ್ ಪೇಮೆಂಟ್ ಚಿಪ್ ಗಳನ್ನು ಒಳಗೊಂಡಿದೆ. ಇದು ಮೊಬೈಲ್ ಅಪ್ಲಿಕೇಶನ್ ಜೊತೆಗೆ ಸಂಯೋಜಿತವಾಗಿ ಕಾರ್ಯನಿರ್ವಹಿಸುತ್ತದೆ. ಬಳಕೆದಾರರು ಫೋನ್ ನಲ್ಲಿರುವ ಪೇಮೆಂಟ್ ಅಪ್ಲಿಕೇಶನ್ ಗಳಿಂದ ಬ್ಯಾಂಕ್ ಖಾತೆಗಳನ್ನು ರಿಂಗ್ ಗೆ ಲಿಂಕ್ ಮಾಡಬೇಕು. ಆನಂತರ ಪೇಮೆಂಟ್ ಯಂತ್ರದ ಬಳಿ ಉಂಗುರವನ್ನು ತೋರಿಸಿ ಪಾವತಿ ಮಾಡಬಹುದು.

ಈ ಉಂಗುರವನ್ನು ಚಾರ್ಜ್ ಮಾಡುವ ಅಗತ್ಯವಿಲ್ಲ, ಈ ಉಂಗುರದ ತಂತ್ರಜ್ಞಾನವನ್ನು ಆಭರಣದ ಕಂಪನಿಗಳಿಗೆ ನೀಡಿದರೆ, ಚಿನ್ನ ಹಾಗೂ ಬೆಳ್ಳಿಯಿಂದ ಸ್ಮಾರ್ಟ್ ಉಂಗುರವನ್ನು ತಯಾರಿಸಬಹುದು.

ಈ ಸ್ಮಾರ್ಟ್ ರಿಂಗ್ ಈಗಾಗಲೇ ಭಾರತಕ್ಕೂ ಕೂಡ ಲಗ್ಗೆ ಇಟ್ಟಿದೆ. ಸ್ವದೇಶಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಸ್ಮಾರ್ಟಪ್ 7, ವಯರ್ಲೆಸ್ ಪಾವತಿಗಾಗಿ 7 ರಿಂಗ್ ಎಂಬ ಉಂಗುರವನ್ನು ಬಿಡುಗಡೆ ಮಾಡಿದೆ. ಎನ್ ಪಿಸಿಐ ಸಹಯೋಗದೊಂದಿಗೆ ಭಾರತೀಯ ಬ್ರಾಂಡ್ 7 ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರೀಮಿಯಂ ಜಿರ್ಕೋನಿಯ ಸೆರಾಮಿಕ್ಸ್ ನಿಂದ ಅಭಿವೃದ್ಧಿಪಡಿಸಲಾಗಿದೆ.

lokesh

Share
Published by
lokesh

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

4 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

5 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

5 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

5 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

5 hours ago