ವಿಜ್ಞಾನ ತಂತ್ರಜ್ಞಾನ

ಡಿಜಿಟಲ್ ಪೇಮೆಂಟ್ ಗಾಗಿ ಬಂತು ಸ್ಮಾರ್ಟ್ ರಿಂಗ್

ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ

ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು ಕೂಡ ಕರೆನ್ಸಿ ನೋಟುಗಳ ಮೂಲಕವೇ ನಡೆಯುತ್ತಿದ್ದವು. ಕ್ರಮೇಣ ಇದು ಎಟಿಎಂ ಕಾರ್ಡ್ ಆಗಿ ಬದಲಾಯಿತು ನಂತರ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪೇಟಿಎಂ, ಗೂಗಲ್ ಪೇ, ಫೋನ್ ಪೇ, ಆ್ಯಪ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಈ ಆ್ಯಪ್ ಗಳು ಮಾರುಕಟ್ಟೆಗೆ ಬಂದ ನಂತರ ಜನಗಳು ತಮ್ಮ ಕೆಲಸವನ್ನು ಸುಲಭವಾಗಿಸಿಕೊಳ್ಳಲು ಈ ತಂತ್ರಜ್ಞಾನ ಗಳನ್ನು ಬಳಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಬೆಳವಣಿಗೆಯಾಗಿ ಸ್ಮಾರ್ಟ್ ರಿಂಗನ್ನು ಬಿಡುಗಡೆ ಮಾಡುವ ಮೂಲಕ ತಂತ್ರಜ್ಞಾನ ಹೊಸ ಪಾವತಿ ವಿಧಾನವನ್ನು ಪರಿಚಯಿಸಿದೆ.

ಸಾಮಾನ್ಯವಾಗಿ ಎಲ್ಲರೂ ಕೂಡ ಕೈಗೆ ಉಂಗುರ ಹಾಕಿಕೊಳ್ಳುತ್ತಾರೆ. ಆದರೆ ಅದೇ ಉಂಗುರ ಇದೀಗ ಸ್ಮಾರ್ಟ್ ಟೂಲ್ ಆಗಿ ಬದಲಾಗಿದೆ. ಕೈಯಲ್ಲಿರುವ ಉಂಗುರದ ಮೂಲಕ ನಗದು ರಹಿತ ಪಾವತಿ ಮಾಡುವ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನು ಸ್ಮಾರ್ಟ್ ರಿಂಗ್ ಎಂದು ಕರೆಯಲಾಗುತ್ತದೆ. ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಹಾಗೂ ಪೇಟಿಎಂ, ಗೂಗಲ್ ಪೇ, ಫೋನ್ ಪೇ ಅಥವಾ ಫೋನ್ ಕರೆಗಳ ಅಗತ್ಯವಿಲ್ಲದೆ ಈ ರಿಂಗ್ ನಿಂದ ಪೇಮೆಂಟ್ ಮಾಡಬಹುದು.

ಈ ಸ್ಮಾರ್ಟ್ ರಿಂಗ್ ಅನ್ನು ಹಾಂಕಾಂಗ್ ಮೂಲದ ಟೊಪಿ ಎಂಬ ಕಂಪನಿ ಅಭಿವೃದ್ಧಿಪಡಿಸಿದೆ. ಈ ರಿಂಗ್ ಸ್ಮಾರ್ಟ್ ವಯರ್ಲೆಸ್ ಪೇಮೆಂಟ್ ಚಿಪ್ ಗಳನ್ನು ಒಳಗೊಂಡಿದೆ. ಇದು ಮೊಬೈಲ್ ಅಪ್ಲಿಕೇಶನ್ ಜೊತೆಗೆ ಸಂಯೋಜಿತವಾಗಿ ಕಾರ್ಯನಿರ್ವಹಿಸುತ್ತದೆ. ಬಳಕೆದಾರರು ಫೋನ್ ನಲ್ಲಿರುವ ಪೇಮೆಂಟ್ ಅಪ್ಲಿಕೇಶನ್ ಗಳಿಂದ ಬ್ಯಾಂಕ್ ಖಾತೆಗಳನ್ನು ರಿಂಗ್ ಗೆ ಲಿಂಕ್ ಮಾಡಬೇಕು. ಆನಂತರ ಪೇಮೆಂಟ್ ಯಂತ್ರದ ಬಳಿ ಉಂಗುರವನ್ನು ತೋರಿಸಿ ಪಾವತಿ ಮಾಡಬಹುದು.

ಈ ಉಂಗುರವನ್ನು ಚಾರ್ಜ್ ಮಾಡುವ ಅಗತ್ಯವಿಲ್ಲ, ಈ ಉಂಗುರದ ತಂತ್ರಜ್ಞಾನವನ್ನು ಆಭರಣದ ಕಂಪನಿಗಳಿಗೆ ನೀಡಿದರೆ, ಚಿನ್ನ ಹಾಗೂ ಬೆಳ್ಳಿಯಿಂದ ಸ್ಮಾರ್ಟ್ ಉಂಗುರವನ್ನು ತಯಾರಿಸಬಹುದು.

ಈ ಸ್ಮಾರ್ಟ್ ರಿಂಗ್ ಈಗಾಗಲೇ ಭಾರತಕ್ಕೂ ಕೂಡ ಲಗ್ಗೆ ಇಟ್ಟಿದೆ. ಸ್ವದೇಶಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಸ್ಮಾರ್ಟಪ್ 7, ವಯರ್ಲೆಸ್ ಪಾವತಿಗಾಗಿ 7 ರಿಂಗ್ ಎಂಬ ಉಂಗುರವನ್ನು ಬಿಡುಗಡೆ ಮಾಡಿದೆ. ಎನ್ ಪಿಸಿಐ ಸಹಯೋಗದೊಂದಿಗೆ ಭಾರತೀಯ ಬ್ರಾಂಡ್ 7 ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರೀಮಿಯಂ ಜಿರ್ಕೋನಿಯ ಸೆರಾಮಿಕ್ಸ್ ನಿಂದ ಅಭಿವೃದ್ಧಿಪಡಿಸಲಾಗಿದೆ.

lokesh

Share
Published by
lokesh

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago