ವಿಜ್ಞಾನ ತಂತ್ರಜ್ಞಾನ

ಡಿಜಿಟಲ್ ಪೇಮೆಂಟ್ ಗಾಗಿ ಬಂತು ಸ್ಮಾರ್ಟ್ ರಿಂಗ್

ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ

ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು ಕೂಡ ಕರೆನ್ಸಿ ನೋಟುಗಳ ಮೂಲಕವೇ ನಡೆಯುತ್ತಿದ್ದವು. ಕ್ರಮೇಣ ಇದು ಎಟಿಎಂ ಕಾರ್ಡ್ ಆಗಿ ಬದಲಾಯಿತು ನಂತರ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪೇಟಿಎಂ, ಗೂಗಲ್ ಪೇ, ಫೋನ್ ಪೇ, ಆ್ಯಪ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಈ ಆ್ಯಪ್ ಗಳು ಮಾರುಕಟ್ಟೆಗೆ ಬಂದ ನಂತರ ಜನಗಳು ತಮ್ಮ ಕೆಲಸವನ್ನು ಸುಲಭವಾಗಿಸಿಕೊಳ್ಳಲು ಈ ತಂತ್ರಜ್ಞಾನ ಗಳನ್ನು ಬಳಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಬೆಳವಣಿಗೆಯಾಗಿ ಸ್ಮಾರ್ಟ್ ರಿಂಗನ್ನು ಬಿಡುಗಡೆ ಮಾಡುವ ಮೂಲಕ ತಂತ್ರಜ್ಞಾನ ಹೊಸ ಪಾವತಿ ವಿಧಾನವನ್ನು ಪರಿಚಯಿಸಿದೆ.

ಸಾಮಾನ್ಯವಾಗಿ ಎಲ್ಲರೂ ಕೂಡ ಕೈಗೆ ಉಂಗುರ ಹಾಕಿಕೊಳ್ಳುತ್ತಾರೆ. ಆದರೆ ಅದೇ ಉಂಗುರ ಇದೀಗ ಸ್ಮಾರ್ಟ್ ಟೂಲ್ ಆಗಿ ಬದಲಾಗಿದೆ. ಕೈಯಲ್ಲಿರುವ ಉಂಗುರದ ಮೂಲಕ ನಗದು ರಹಿತ ಪಾವತಿ ಮಾಡುವ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನು ಸ್ಮಾರ್ಟ್ ರಿಂಗ್ ಎಂದು ಕರೆಯಲಾಗುತ್ತದೆ. ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಹಾಗೂ ಪೇಟಿಎಂ, ಗೂಗಲ್ ಪೇ, ಫೋನ್ ಪೇ ಅಥವಾ ಫೋನ್ ಕರೆಗಳ ಅಗತ್ಯವಿಲ್ಲದೆ ಈ ರಿಂಗ್ ನಿಂದ ಪೇಮೆಂಟ್ ಮಾಡಬಹುದು.

ಈ ಸ್ಮಾರ್ಟ್ ರಿಂಗ್ ಅನ್ನು ಹಾಂಕಾಂಗ್ ಮೂಲದ ಟೊಪಿ ಎಂಬ ಕಂಪನಿ ಅಭಿವೃದ್ಧಿಪಡಿಸಿದೆ. ಈ ರಿಂಗ್ ಸ್ಮಾರ್ಟ್ ವಯರ್ಲೆಸ್ ಪೇಮೆಂಟ್ ಚಿಪ್ ಗಳನ್ನು ಒಳಗೊಂಡಿದೆ. ಇದು ಮೊಬೈಲ್ ಅಪ್ಲಿಕೇಶನ್ ಜೊತೆಗೆ ಸಂಯೋಜಿತವಾಗಿ ಕಾರ್ಯನಿರ್ವಹಿಸುತ್ತದೆ. ಬಳಕೆದಾರರು ಫೋನ್ ನಲ್ಲಿರುವ ಪೇಮೆಂಟ್ ಅಪ್ಲಿಕೇಶನ್ ಗಳಿಂದ ಬ್ಯಾಂಕ್ ಖಾತೆಗಳನ್ನು ರಿಂಗ್ ಗೆ ಲಿಂಕ್ ಮಾಡಬೇಕು. ಆನಂತರ ಪೇಮೆಂಟ್ ಯಂತ್ರದ ಬಳಿ ಉಂಗುರವನ್ನು ತೋರಿಸಿ ಪಾವತಿ ಮಾಡಬಹುದು.

ಈ ಉಂಗುರವನ್ನು ಚಾರ್ಜ್ ಮಾಡುವ ಅಗತ್ಯವಿಲ್ಲ, ಈ ಉಂಗುರದ ತಂತ್ರಜ್ಞಾನವನ್ನು ಆಭರಣದ ಕಂಪನಿಗಳಿಗೆ ನೀಡಿದರೆ, ಚಿನ್ನ ಹಾಗೂ ಬೆಳ್ಳಿಯಿಂದ ಸ್ಮಾರ್ಟ್ ಉಂಗುರವನ್ನು ತಯಾರಿಸಬಹುದು.

ಈ ಸ್ಮಾರ್ಟ್ ರಿಂಗ್ ಈಗಾಗಲೇ ಭಾರತಕ್ಕೂ ಕೂಡ ಲಗ್ಗೆ ಇಟ್ಟಿದೆ. ಸ್ವದೇಶಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಸ್ಮಾರ್ಟಪ್ 7, ವಯರ್ಲೆಸ್ ಪಾವತಿಗಾಗಿ 7 ರಿಂಗ್ ಎಂಬ ಉಂಗುರವನ್ನು ಬಿಡುಗಡೆ ಮಾಡಿದೆ. ಎನ್ ಪಿಸಿಐ ಸಹಯೋಗದೊಂದಿಗೆ ಭಾರತೀಯ ಬ್ರಾಂಡ್ 7 ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರೀಮಿಯಂ ಜಿರ್ಕೋನಿಯ ಸೆರಾಮಿಕ್ಸ್ ನಿಂದ ಅಭಿವೃದ್ಧಿಪಡಿಸಲಾಗಿದೆ.

lokesh

Share
Published by
lokesh

Recent Posts

ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಮುಂದುವರಿದ ಚಿಕಿತ್ಸೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ…

13 mins ago

ಸುಟ್ಟು ಹೋದ ಮೊಜ್ತಾಬಾ ಖಮೇನಿ ಮುಖ: ಶೀಘ್ರದಲ್ಲೇ ಪ್ಲಾಸ್ಟಿಕ್‌ ಸರ್ಜರಿ

ವಾಷಿಂಗ್ಟನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಅವರ ಮುಖ ವಿರೂಪಗೊಂಡಿದ್ದು, ಪ್ಲಾಸ್ಟಿಕ್‌ ಸರ್ಜರಿ…

31 mins ago

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪ್ರಚಂಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಅಮಿತ್‌ ಶಾ ವಿಶ್ವಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…

1 hour ago

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

2 hours ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

3 hours ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

3 hours ago