ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ
ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು ಕೂಡ ಕರೆನ್ಸಿ ನೋಟುಗಳ ಮೂಲಕವೇ ನಡೆಯುತ್ತಿದ್ದವು. ಕ್ರಮೇಣ ಇದು ಎಟಿಎಂ ಕಾರ್ಡ್ ಆಗಿ ಬದಲಾಯಿತು ನಂತರ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪೇಟಿಎಂ, ಗೂಗಲ್ ಪೇ, ಫೋನ್ ಪೇ, ಆ್ಯಪ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಈ ಆ್ಯಪ್ ಗಳು ಮಾರುಕಟ್ಟೆಗೆ ಬಂದ ನಂತರ ಜನಗಳು ತಮ್ಮ ಕೆಲಸವನ್ನು ಸುಲಭವಾಗಿಸಿಕೊಳ್ಳಲು ಈ ತಂತ್ರಜ್ಞಾನ ಗಳನ್ನು ಬಳಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಬೆಳವಣಿಗೆಯಾಗಿ ಸ್ಮಾರ್ಟ್ ರಿಂಗನ್ನು ಬಿಡುಗಡೆ ಮಾಡುವ ಮೂಲಕ ತಂತ್ರಜ್ಞಾನ ಹೊಸ ಪಾವತಿ ವಿಧಾನವನ್ನು ಪರಿಚಯಿಸಿದೆ.
ಸಾಮಾನ್ಯವಾಗಿ ಎಲ್ಲರೂ ಕೂಡ ಕೈಗೆ ಉಂಗುರ ಹಾಕಿಕೊಳ್ಳುತ್ತಾರೆ. ಆದರೆ ಅದೇ ಉಂಗುರ ಇದೀಗ ಸ್ಮಾರ್ಟ್ ಟೂಲ್ ಆಗಿ ಬದಲಾಗಿದೆ. ಕೈಯಲ್ಲಿರುವ ಉಂಗುರದ ಮೂಲಕ ನಗದು ರಹಿತ ಪಾವತಿ ಮಾಡುವ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಇದನ್ನು ಸ್ಮಾರ್ಟ್ ರಿಂಗ್ ಎಂದು ಕರೆಯಲಾಗುತ್ತದೆ. ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಹಾಗೂ ಪೇಟಿಎಂ, ಗೂಗಲ್ ಪೇ, ಫೋನ್ ಪೇ ಅಥವಾ ಫೋನ್ ಕರೆಗಳ ಅಗತ್ಯವಿಲ್ಲದೆ ಈ ರಿಂಗ್ ನಿಂದ ಪೇಮೆಂಟ್ ಮಾಡಬಹುದು.
ಈ ಸ್ಮಾರ್ಟ್ ರಿಂಗ್ ಅನ್ನು ಹಾಂಕಾಂಗ್ ಮೂಲದ ಟೊಪಿ ಎಂಬ ಕಂಪನಿ ಅಭಿವೃದ್ಧಿಪಡಿಸಿದೆ. ಈ ರಿಂಗ್ ಸ್ಮಾರ್ಟ್ ವಯರ್ಲೆಸ್ ಪೇಮೆಂಟ್ ಚಿಪ್ ಗಳನ್ನು ಒಳಗೊಂಡಿದೆ. ಇದು ಮೊಬೈಲ್ ಅಪ್ಲಿಕೇಶನ್ ಜೊತೆಗೆ ಸಂಯೋಜಿತವಾಗಿ ಕಾರ್ಯನಿರ್ವಹಿಸುತ್ತದೆ. ಬಳಕೆದಾರರು ಫೋನ್ ನಲ್ಲಿರುವ ಪೇಮೆಂಟ್ ಅಪ್ಲಿಕೇಶನ್ ಗಳಿಂದ ಬ್ಯಾಂಕ್ ಖಾತೆಗಳನ್ನು ರಿಂಗ್ ಗೆ ಲಿಂಕ್ ಮಾಡಬೇಕು. ಆನಂತರ ಪೇಮೆಂಟ್ ಯಂತ್ರದ ಬಳಿ ಉಂಗುರವನ್ನು ತೋರಿಸಿ ಪಾವತಿ ಮಾಡಬಹುದು.
ಈ ಉಂಗುರವನ್ನು ಚಾರ್ಜ್ ಮಾಡುವ ಅಗತ್ಯವಿಲ್ಲ, ಈ ಉಂಗುರದ ತಂತ್ರಜ್ಞಾನವನ್ನು ಆಭರಣದ ಕಂಪನಿಗಳಿಗೆ ನೀಡಿದರೆ, ಚಿನ್ನ ಹಾಗೂ ಬೆಳ್ಳಿಯಿಂದ ಸ್ಮಾರ್ಟ್ ಉಂಗುರವನ್ನು ತಯಾರಿಸಬಹುದು.
ಈ ಸ್ಮಾರ್ಟ್ ರಿಂಗ್ ಈಗಾಗಲೇ ಭಾರತಕ್ಕೂ ಕೂಡ ಲಗ್ಗೆ ಇಟ್ಟಿದೆ. ಸ್ವದೇಶಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಸ್ಮಾರ್ಟಪ್ 7, ವಯರ್ಲೆಸ್ ಪಾವತಿಗಾಗಿ 7 ರಿಂಗ್ ಎಂಬ ಉಂಗುರವನ್ನು ಬಿಡುಗಡೆ ಮಾಡಿದೆ. ಎನ್ ಪಿಸಿಐ ಸಹಯೋಗದೊಂದಿಗೆ ಭಾರತೀಯ ಬ್ರಾಂಡ್ 7 ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರೀಮಿಯಂ ಜಿರ್ಕೋನಿಯ ಸೆರಾಮಿಕ್ಸ್ ನಿಂದ ಅಭಿವೃದ್ಧಿಪಡಿಸಲಾಗಿದೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…