ವಿಜ್ಞಾನ ತಂತ್ರಜ್ಞಾನ

ಡಿಜಿಟಲ್ ಪೇಮೆಂಟ್ ಗಾಗಿ ಬಂತು ಸ್ಮಾರ್ಟ್ ರಿಂಗ್

ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ

ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು ಕೂಡ ಕರೆನ್ಸಿ ನೋಟುಗಳ ಮೂಲಕವೇ ನಡೆಯುತ್ತಿದ್ದವು. ಕ್ರಮೇಣ ಇದು ಎಟಿಎಂ ಕಾರ್ಡ್ ಆಗಿ ಬದಲಾಯಿತು ನಂತರ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಪೇಟಿಎಂ, ಗೂಗಲ್ ಪೇ, ಫೋನ್ ಪೇ, ಆ್ಯಪ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟವು. ಈ ಆ್ಯಪ್ ಗಳು ಮಾರುಕಟ್ಟೆಗೆ ಬಂದ ನಂತರ ಜನಗಳು ತಮ್ಮ ಕೆಲಸವನ್ನು ಸುಲಭವಾಗಿಸಿಕೊಳ್ಳಲು ಈ ತಂತ್ರಜ್ಞಾನ ಗಳನ್ನು ಬಳಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಬೆಳವಣಿಗೆಯಾಗಿ ಸ್ಮಾರ್ಟ್ ರಿಂಗನ್ನು ಬಿಡುಗಡೆ ಮಾಡುವ ಮೂಲಕ ತಂತ್ರಜ್ಞಾನ ಹೊಸ ಪಾವತಿ ವಿಧಾನವನ್ನು ಪರಿಚಯಿಸಿದೆ.

ಸಾಮಾನ್ಯವಾಗಿ ಎಲ್ಲರೂ ಕೂಡ ಕೈಗೆ ಉಂಗುರ ಹಾಕಿಕೊಳ್ಳುತ್ತಾರೆ. ಆದರೆ ಅದೇ ಉಂಗುರ ಇದೀಗ ಸ್ಮಾರ್ಟ್ ಟೂಲ್ ಆಗಿ ಬದಲಾಗಿದೆ. ಕೈಯಲ್ಲಿರುವ ಉಂಗುರದ ಮೂಲಕ ನಗದು ರಹಿತ ಪಾವತಿ ಮಾಡುವ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನು ಸ್ಮಾರ್ಟ್ ರಿಂಗ್ ಎಂದು ಕರೆಯಲಾಗುತ್ತದೆ. ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಹಾಗೂ ಪೇಟಿಎಂ, ಗೂಗಲ್ ಪೇ, ಫೋನ್ ಪೇ ಅಥವಾ ಫೋನ್ ಕರೆಗಳ ಅಗತ್ಯವಿಲ್ಲದೆ ಈ ರಿಂಗ್ ನಿಂದ ಪೇಮೆಂಟ್ ಮಾಡಬಹುದು.

ಈ ಸ್ಮಾರ್ಟ್ ರಿಂಗ್ ಅನ್ನು ಹಾಂಕಾಂಗ್ ಮೂಲದ ಟೊಪಿ ಎಂಬ ಕಂಪನಿ ಅಭಿವೃದ್ಧಿಪಡಿಸಿದೆ. ಈ ರಿಂಗ್ ಸ್ಮಾರ್ಟ್ ವಯರ್ಲೆಸ್ ಪೇಮೆಂಟ್ ಚಿಪ್ ಗಳನ್ನು ಒಳಗೊಂಡಿದೆ. ಇದು ಮೊಬೈಲ್ ಅಪ್ಲಿಕೇಶನ್ ಜೊತೆಗೆ ಸಂಯೋಜಿತವಾಗಿ ಕಾರ್ಯನಿರ್ವಹಿಸುತ್ತದೆ. ಬಳಕೆದಾರರು ಫೋನ್ ನಲ್ಲಿರುವ ಪೇಮೆಂಟ್ ಅಪ್ಲಿಕೇಶನ್ ಗಳಿಂದ ಬ್ಯಾಂಕ್ ಖಾತೆಗಳನ್ನು ರಿಂಗ್ ಗೆ ಲಿಂಕ್ ಮಾಡಬೇಕು. ಆನಂತರ ಪೇಮೆಂಟ್ ಯಂತ್ರದ ಬಳಿ ಉಂಗುರವನ್ನು ತೋರಿಸಿ ಪಾವತಿ ಮಾಡಬಹುದು.

ಈ ಉಂಗುರವನ್ನು ಚಾರ್ಜ್ ಮಾಡುವ ಅಗತ್ಯವಿಲ್ಲ, ಈ ಉಂಗುರದ ತಂತ್ರಜ್ಞಾನವನ್ನು ಆಭರಣದ ಕಂಪನಿಗಳಿಗೆ ನೀಡಿದರೆ, ಚಿನ್ನ ಹಾಗೂ ಬೆಳ್ಳಿಯಿಂದ ಸ್ಮಾರ್ಟ್ ಉಂಗುರವನ್ನು ತಯಾರಿಸಬಹುದು.

ಈ ಸ್ಮಾರ್ಟ್ ರಿಂಗ್ ಈಗಾಗಲೇ ಭಾರತಕ್ಕೂ ಕೂಡ ಲಗ್ಗೆ ಇಟ್ಟಿದೆ. ಸ್ವದೇಶಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಸ್ಮಾರ್ಟಪ್ 7, ವಯರ್ಲೆಸ್ ಪಾವತಿಗಾಗಿ 7 ರಿಂಗ್ ಎಂಬ ಉಂಗುರವನ್ನು ಬಿಡುಗಡೆ ಮಾಡಿದೆ. ಎನ್ ಪಿಸಿಐ ಸಹಯೋಗದೊಂದಿಗೆ ಭಾರತೀಯ ಬ್ರಾಂಡ್ 7 ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರೀಮಿಯಂ ಜಿರ್ಕೋನಿಯ ಸೆರಾಮಿಕ್ಸ್ ನಿಂದ ಅಭಿವೃದ್ಧಿಪಡಿಸಲಾಗಿದೆ.

lokesh

Share
Published by
lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

18 hours ago