ವಿಜ್ಞಾನ ತಂತ್ರಜ್ಞಾನ

ಖಾತೆಗಳ ನಿರ್ಬಂಧದ ಆದೇಶಗಳು ಸಕಾರಣವಾಗಿ ಬಳಕೆದಾರರಿಗೆ ತಿಳಿಸುವಂತಿರಬೇಕು: ಹೈಕೋರ್ಟ್‌ನಲ್ಲಿ ಟ್ವಿಟರ್‌ ವಾದ

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸುವ ಟ್ವಿಟರ್‌ ಖಾತೆ ನಿರ್ಬಂಧ ಆದೇಶದಲ್ಲಿ ಸಕಾರಣಗಳು ಇರಬೇಕು. ಆಗ ಅವುಗಳನ್ನು ಬಳಕೆದಾರರಿಗೆ ತಿಳಿಸಬಹುದು ಎಂದು ಹೈಕೋರ್ಟ್‌ನಲ್ಲಿ ಗುರುವಾರ ಟ್ವಿಟರ್‌ ವಾದಿಸಿತು.

ಕೆಲ ವೈಯಕ್ತಿಕ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ಬಂಧದ ಆದೇಶಗಳಲ್ಲಿ ಸಕಾರಣಗಳನ್ನು ದಾಖಲಿಸದಿದ್ದರೆ ನಂತರದ ಸಂದರ್ಭದಲ್ಲಿ ಅವುಗಳನ್ನು ಸೃಷ್ಟಿಸುವ ಸಾಧ್ಯತೆ ಇರುತ್ತದೆ ಎಂದು ಟ್ವಿಟರ್‌ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದಿಸಿದರು.

“ಸಕಾರಣದ ಅಥವಾ ಮೌಖಿಕ (ಸ್ಪೀಕಿಂಗ್‌) ಆದೇಶದ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಎರಡರಲ್ಲೂ ಸಕಾರಣಗಳು ಇರಬೇಕು. ಹೀಗಾದಲ್ಲಿ ನೊಂದವರು ಆದೇಶವನ್ನು ಪ್ರಶ್ನಿಸಬೇಕೆ ಅಥವಾ ಬೇಡವೇ ಎಂದು ನಿರ್ಧರಿಸಲು ಸಾಧ್ಯವಾಗುತ್ತದೆ” ಎಂದು ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದಿಸಿದ್ದನ್ನು ಪೀಠವು ದಾಖಲಿಸಿಕೊಂಡಿತು.

ಟ್ವಿಟರ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 69ಎ ನಲ್ಲಿ ಸಂವಹನ ಎಂಬ ಪದ ಗೈರಾಗಿರುವ ಮಾತ್ರಕ್ಕೆ ಸಕಾರಣಗಳ ಸಂವಹನಕ್ಕೆ ಅಡ್ಡಿಯಾಗುತ್ತದೆ ಎಂದರ್ಥವಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಬೇಕಾಗುತ್ತದೆ” ಎಂದರು. “ಸಕಾರಣ ನೀಡುವುದಿಲ್ಲ ಮತ್ತು ಅದರ ಸಂವಹನ ಮಾಡುವುದಿಲ್ಲ ಎಂಬುದು ರಕ್ಷಣೆಯ ವಿರುದ್ಧವಾಗುತ್ತದೆ. ಇದರಿಂದ ಬಾಧಿತರಾದವರು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರಲಿದೆ” ಎಂದು ವಾದಿಸಿದರು. ಟ್ವಿಟರ್‌ ಪರ ವಕೀಲರು ವಾದ ಪೂರ್ಣಗೊಳಿಸಿದ್ದು, ಕೇಂದ್ರ ಸರ್ಕಾರವು ಪ್ರತಿಕ್ರಿಯೆ ದಾಖಲಿಸಲು ಕಾಲಾವಕಾಶ ಕೋರಿತು. ಹೀಗಾಗಿ, ವಿಚಾರಣೆಯನ್ನು ನ. 16ಕ್ಕೆ ಮುಂದೂಡಲಾಗಿದೆ.

andolanait

Share
Published by
andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

41 mins ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

1 hour ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

1 hour ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

1 hour ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

2 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

2 hours ago