ವಿಜ್ಞಾನ ತಂತ್ರಜ್ಞಾನ

ಖಾತೆಗಳ ನಿರ್ಬಂಧದ ಆದೇಶಗಳು ಸಕಾರಣವಾಗಿ ಬಳಕೆದಾರರಿಗೆ ತಿಳಿಸುವಂತಿರಬೇಕು: ಹೈಕೋರ್ಟ್‌ನಲ್ಲಿ ಟ್ವಿಟರ್‌ ವಾದ

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸುವ ಟ್ವಿಟರ್‌ ಖಾತೆ ನಿರ್ಬಂಧ ಆದೇಶದಲ್ಲಿ ಸಕಾರಣಗಳು ಇರಬೇಕು. ಆಗ ಅವುಗಳನ್ನು ಬಳಕೆದಾರರಿಗೆ ತಿಳಿಸಬಹುದು ಎಂದು ಹೈಕೋರ್ಟ್‌ನಲ್ಲಿ ಗುರುವಾರ ಟ್ವಿಟರ್‌ ವಾದಿಸಿತು.

ಕೆಲ ವೈಯಕ್ತಿಕ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ಬಂಧದ ಆದೇಶಗಳಲ್ಲಿ ಸಕಾರಣಗಳನ್ನು ದಾಖಲಿಸದಿದ್ದರೆ ನಂತರದ ಸಂದರ್ಭದಲ್ಲಿ ಅವುಗಳನ್ನು ಸೃಷ್ಟಿಸುವ ಸಾಧ್ಯತೆ ಇರುತ್ತದೆ ಎಂದು ಟ್ವಿಟರ್‌ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದಿಸಿದರು.

“ಸಕಾರಣದ ಅಥವಾ ಮೌಖಿಕ (ಸ್ಪೀಕಿಂಗ್‌) ಆದೇಶದ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಎರಡರಲ್ಲೂ ಸಕಾರಣಗಳು ಇರಬೇಕು. ಹೀಗಾದಲ್ಲಿ ನೊಂದವರು ಆದೇಶವನ್ನು ಪ್ರಶ್ನಿಸಬೇಕೆ ಅಥವಾ ಬೇಡವೇ ಎಂದು ನಿರ್ಧರಿಸಲು ಸಾಧ್ಯವಾಗುತ್ತದೆ” ಎಂದು ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದಿಸಿದ್ದನ್ನು ಪೀಠವು ದಾಖಲಿಸಿಕೊಂಡಿತು.

ಟ್ವಿಟರ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ 69ಎ ನಲ್ಲಿ ಸಂವಹನ ಎಂಬ ಪದ ಗೈರಾಗಿರುವ ಮಾತ್ರಕ್ಕೆ ಸಕಾರಣಗಳ ಸಂವಹನಕ್ಕೆ ಅಡ್ಡಿಯಾಗುತ್ತದೆ ಎಂದರ್ಥವಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇರಬೇಕಾಗುತ್ತದೆ” ಎಂದರು. “ಸಕಾರಣ ನೀಡುವುದಿಲ್ಲ ಮತ್ತು ಅದರ ಸಂವಹನ ಮಾಡುವುದಿಲ್ಲ ಎಂಬುದು ರಕ್ಷಣೆಯ ವಿರುದ್ಧವಾಗುತ್ತದೆ. ಇದರಿಂದ ಬಾಧಿತರಾದವರು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರಲಿದೆ” ಎಂದು ವಾದಿಸಿದರು. ಟ್ವಿಟರ್‌ ಪರ ವಕೀಲರು ವಾದ ಪೂರ್ಣಗೊಳಿಸಿದ್ದು, ಕೇಂದ್ರ ಸರ್ಕಾರವು ಪ್ರತಿಕ್ರಿಯೆ ದಾಖಲಿಸಲು ಕಾಲಾವಕಾಶ ಕೋರಿತು. ಹೀಗಾಗಿ, ವಿಚಾರಣೆಯನ್ನು ನ. 16ಕ್ಕೆ ಮುಂದೂಡಲಾಗಿದೆ.

andolanait

Share
Published by
andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago