ವಿಜ್ಞಾನ ತಂತ್ರಜ್ಞಾನ

ಟ್ವಿಟರ್ ಹಕ್ಕಿಯನ್ನು ಹರಾಜಿಗಿಟ್ಟ ಮಾಲೀಕ ಎಲಾನ್ ಮಸ್ಕ್!

ವಾಷಿಂಗ್ಟನ್ :  ನಷ್ಟದಲ್ಲಿರುವ ಮೈಕ್ರೊ ಬ್ಲಾಗಿಂಗ್ ತಾಣ ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಈಗ ಕಂಪನಿಯ ಪ್ರಧಾನ ಕಚೇರಿಯಲ್ಲಿರುವ ವಸ್ತುಗಳನ್ನು ಹರಾಜು ಹಾಕಲು ಮುಂದಾಗಿದ್ದಾರೆ. 27 ಗಂಟೆ ಅವಧಿಯ ಆನ್​​ಲೈನ್ ಹರಾಜು ಪ್ರಕ್ರಿಯೆಯನ್ನು ಅವರು ಆರಂಭಿಸಿದ್ದು, ಟ್ವಿಟರ್​ನ ಸ್ಯಾನ್​​ ಫ್ರಾನ್ಸಿಸ್ಕೊದಲ್ಲಿರುವ ಪ್ರಧಾನ ಕಚೇರಿಯ ಪೀಠೋಪಕರಣ, ಅಲಂಕಾರಿಕ ಉಪಕರಣಗಳು, ಅಡುಗೆ ಕೊಠಡಿಗೆ ಸಂಬಂಧಿಸಿದ ಉಪಕರಣಗಳು ಮತ್ತಿತರ ವಸ್ತುಗಳನ್ನು ಹರಾಜಿಗಿಟ್ಟಿದ್ದಾರೆ. ಟ್ವಿಟರ್​ ಹಕ್ಕಿಯ ಪ್ರತಿಮೆಯನ್ನೂ ಹರಾಜಿಗಿಟ್ಟಿದ್ದು, 1 ಲಕ್ಷ ಡಾಲರ್ ಬೆಲೆ ನಿಗದಿಪಡಿಸಿದ್ದಾರೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ. ಒಟ್ಟು 631 ಉಪಕರಣಗಳನ್ನು ಹರಾಜು ಹಾಕಲಾಗುತ್ತಿದ್ದು, ಎಸ್​ಪ್ರೆಸ್ಸೊ ಯಂತ್ರಗಳು, ಮೇಜುಗಳು, ಟಿವಿಗಳು, ಬೈಸಿಕಲ್​, ಚಾರ್ಜಿಂಗ್​ ಸ್ಟೇಷನ್​ಗಳು, ಪಿಜ್ಜಾ ಓವನ್​​ ಕೂಡ ಸೇರಿವೆ.

ಈ ಹರಾಜು ಪ್ರಕ್ರಿಯೆಯಿಂದ ಹಣಕಾಸು ಸ್ಥಿತಿಗೆ ಬಂಧಿಸಿದಂತೆ ಏನೂ ಬದಲಾವಣೆಯಾಗದು ಎಂದು ಹೆರಿಟೇಜ್ ಗ್ಲೋಬಲ್ ಪಾರ್ಟ್ನರ್ಸ್ ಪ್ರತಿನಿಧಿಯೊಬ್ಬರು ಇತ್ತೀಚೆಗೆ ‘ಫಾರ್ಚೂನ್’ ನಿಯತಕಾಲಿಕೆಗೆ ತಿಳಿಸಿದ್ದರು. ಟ್ವಿಟರ್ ಪ್ರಧಾನ ಕಚೇರಿ ವಸ್ತುಗಳ ಹರಾಜು ವಿಚಾರವಾಗಿ ಆಕ್ಷನ್​​ ಹೌಸ್​​ಗಳು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

ಕಂಪನಿಯ ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿರುವ ಮಸ್ಕ್‌ಗೆ ಇದು ಉತ್ತಮ ನಿರ್ಧಾರ ಎನಿಸಬಹುದು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಮತ್ತೊಂದು ಕಚೇರಿಯ ವಿಳಾಸಕ್ಕೆ ಬಾಡಿಗೆ ಪಾವತಿಸಲು ವಿಫಲವಾಗಿರುವ ಬಗ್ಗೆ ಅವರು ಮೊಕದ್ದಮೆಯನ್ನೂ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ಸಿಂಗಾಪುರ ಸೇರಿದಂತೆ ಏಷ್ಯಾ ಪೆಸಿಫಿಕ್ ಪ್ರದೇಶದ ವಿವಿಧೆಡೆ ಇರುವ ಕಚೇರಿಗಳನ್ನೂ ಉಳಿಸಿಕೊಳ್ಳುವುದು ಮಸ್ಕ್ ಅವರಿಗೆ ಸಾಧ್ಯವಾಗಿಲ್ಲ. ಈ ಪ್ರದೇಶಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡಲಾಗಿದೆ ಎಂದು ಇತ್ತೀಚೆಗೆ ‘ಬ್ಲೂಮ್​ಬರ್ಗ್’ ವರದಿ ಮಾಡಿತ್ತು.

ಟ್ವಿಟರ್ ಮಾಲೀಕತ್ವ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಮಸ್ಕ್ ಅವರು ಕಂಪನಿ ಅರ್ಧದಷ್ಟು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದರು. ಆಮೇಲೆ ಬ್ಲೂಟಿಕ್​ಗೆ ಶುಲ್ಕ ವಿಧಿಸಲು ಆರಂಭಿಸಿ ವಾಪಸ್ ಪಡೆದಿದ್ದರು. ಮತ್ತೆ ನಿರ್ಧಾರವನ್ನು ಜಾರಿಗೊಳಿಸಿದ್ದರು. ಟ್ವಿಟರ್ ಸಿಇಒ ಹುದ್ದೆಯಲ್ಲಿ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಟ್ವಿಟರ್​​ನಲ್ಲಿ ಪೋಲ್ ನಡೆಸಿದ್ದರು. ಬಳಿಕ ಕೆಲವೇ ದಿನಗಳಲ್ಲಿ ಹುದ್ದೆ ತ್ಯಜಿಸುವ ಬಗ್ಗೆ ಸುಳಿವು ನೀಡಿದ್ದರು. ಹೀಗೆ, ಟ್ವಿಟರ್ ಖರೀದಿಸಿದ ಬಳಿಕ ಮಸ್ಕ್ ಹಲವು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಆದಾಯ ವೃದ್ಧಿಸಿಕೊಳ್ಳಲೆಂದು ‘ಯೂಸರ್ ನೇಂ’ಗಳನ್ನು ಹರಾಜಿಗೆ ಇರಿಸಲು ಟ್ವಿಟರ್ ಮುಂದಾಗಿತ್ತು ಎಂಬ ಸಂಗತಿ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು.

andolanait

Share
Published by
andolanait
Tags: Twitter

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago