ವಿಜ್ಞಾನ ತಂತ್ರಜ್ಞಾನ

ಟ್ವಿಟರ್ ಹಕ್ಕಿಯನ್ನು ಹರಾಜಿಗಿಟ್ಟ ಮಾಲೀಕ ಎಲಾನ್ ಮಸ್ಕ್!

ವಾಷಿಂಗ್ಟನ್ :  ನಷ್ಟದಲ್ಲಿರುವ ಮೈಕ್ರೊ ಬ್ಲಾಗಿಂಗ್ ತಾಣ ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಈಗ ಕಂಪನಿಯ ಪ್ರಧಾನ ಕಚೇರಿಯಲ್ಲಿರುವ ವಸ್ತುಗಳನ್ನು ಹರಾಜು ಹಾಕಲು ಮುಂದಾಗಿದ್ದಾರೆ. 27 ಗಂಟೆ ಅವಧಿಯ ಆನ್​​ಲೈನ್ ಹರಾಜು ಪ್ರಕ್ರಿಯೆಯನ್ನು ಅವರು ಆರಂಭಿಸಿದ್ದು, ಟ್ವಿಟರ್​ನ ಸ್ಯಾನ್​​ ಫ್ರಾನ್ಸಿಸ್ಕೊದಲ್ಲಿರುವ ಪ್ರಧಾನ ಕಚೇರಿಯ ಪೀಠೋಪಕರಣ, ಅಲಂಕಾರಿಕ ಉಪಕರಣಗಳು, ಅಡುಗೆ ಕೊಠಡಿಗೆ ಸಂಬಂಧಿಸಿದ ಉಪಕರಣಗಳು ಮತ್ತಿತರ ವಸ್ತುಗಳನ್ನು ಹರಾಜಿಗಿಟ್ಟಿದ್ದಾರೆ. ಟ್ವಿಟರ್​ ಹಕ್ಕಿಯ ಪ್ರತಿಮೆಯನ್ನೂ ಹರಾಜಿಗಿಟ್ಟಿದ್ದು, 1 ಲಕ್ಷ ಡಾಲರ್ ಬೆಲೆ ನಿಗದಿಪಡಿಸಿದ್ದಾರೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ. ಒಟ್ಟು 631 ಉಪಕರಣಗಳನ್ನು ಹರಾಜು ಹಾಕಲಾಗುತ್ತಿದ್ದು, ಎಸ್​ಪ್ರೆಸ್ಸೊ ಯಂತ್ರಗಳು, ಮೇಜುಗಳು, ಟಿವಿಗಳು, ಬೈಸಿಕಲ್​, ಚಾರ್ಜಿಂಗ್​ ಸ್ಟೇಷನ್​ಗಳು, ಪಿಜ್ಜಾ ಓವನ್​​ ಕೂಡ ಸೇರಿವೆ.

ಈ ಹರಾಜು ಪ್ರಕ್ರಿಯೆಯಿಂದ ಹಣಕಾಸು ಸ್ಥಿತಿಗೆ ಬಂಧಿಸಿದಂತೆ ಏನೂ ಬದಲಾವಣೆಯಾಗದು ಎಂದು ಹೆರಿಟೇಜ್ ಗ್ಲೋಬಲ್ ಪಾರ್ಟ್ನರ್ಸ್ ಪ್ರತಿನಿಧಿಯೊಬ್ಬರು ಇತ್ತೀಚೆಗೆ ‘ಫಾರ್ಚೂನ್’ ನಿಯತಕಾಲಿಕೆಗೆ ತಿಳಿಸಿದ್ದರು. ಟ್ವಿಟರ್ ಪ್ರಧಾನ ಕಚೇರಿ ವಸ್ತುಗಳ ಹರಾಜು ವಿಚಾರವಾಗಿ ಆಕ್ಷನ್​​ ಹೌಸ್​​ಗಳು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

ಕಂಪನಿಯ ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿರುವ ಮಸ್ಕ್‌ಗೆ ಇದು ಉತ್ತಮ ನಿರ್ಧಾರ ಎನಿಸಬಹುದು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಮತ್ತೊಂದು ಕಚೇರಿಯ ವಿಳಾಸಕ್ಕೆ ಬಾಡಿಗೆ ಪಾವತಿಸಲು ವಿಫಲವಾಗಿರುವ ಬಗ್ಗೆ ಅವರು ಮೊಕದ್ದಮೆಯನ್ನೂ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ಸಿಂಗಾಪುರ ಸೇರಿದಂತೆ ಏಷ್ಯಾ ಪೆಸಿಫಿಕ್ ಪ್ರದೇಶದ ವಿವಿಧೆಡೆ ಇರುವ ಕಚೇರಿಗಳನ್ನೂ ಉಳಿಸಿಕೊಳ್ಳುವುದು ಮಸ್ಕ್ ಅವರಿಗೆ ಸಾಧ್ಯವಾಗಿಲ್ಲ. ಈ ಪ್ರದೇಶಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡಲಾಗಿದೆ ಎಂದು ಇತ್ತೀಚೆಗೆ ‘ಬ್ಲೂಮ್​ಬರ್ಗ್’ ವರದಿ ಮಾಡಿತ್ತು.

ಟ್ವಿಟರ್ ಮಾಲೀಕತ್ವ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಮಸ್ಕ್ ಅವರು ಕಂಪನಿ ಅರ್ಧದಷ್ಟು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದರು. ಆಮೇಲೆ ಬ್ಲೂಟಿಕ್​ಗೆ ಶುಲ್ಕ ವಿಧಿಸಲು ಆರಂಭಿಸಿ ವಾಪಸ್ ಪಡೆದಿದ್ದರು. ಮತ್ತೆ ನಿರ್ಧಾರವನ್ನು ಜಾರಿಗೊಳಿಸಿದ್ದರು. ಟ್ವಿಟರ್ ಸಿಇಒ ಹುದ್ದೆಯಲ್ಲಿ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಟ್ವಿಟರ್​​ನಲ್ಲಿ ಪೋಲ್ ನಡೆಸಿದ್ದರು. ಬಳಿಕ ಕೆಲವೇ ದಿನಗಳಲ್ಲಿ ಹುದ್ದೆ ತ್ಯಜಿಸುವ ಬಗ್ಗೆ ಸುಳಿವು ನೀಡಿದ್ದರು. ಹೀಗೆ, ಟ್ವಿಟರ್ ಖರೀದಿಸಿದ ಬಳಿಕ ಮಸ್ಕ್ ಹಲವು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಆದಾಯ ವೃದ್ಧಿಸಿಕೊಳ್ಳಲೆಂದು ‘ಯೂಸರ್ ನೇಂ’ಗಳನ್ನು ಹರಾಜಿಗೆ ಇರಿಸಲು ಟ್ವಿಟರ್ ಮುಂದಾಗಿತ್ತು ಎಂಬ ಸಂಗತಿ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು.

andolanait

Share
Published by
andolanait
Tags: Twitter

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago