ವಿಜ್ಞಾನ ತಂತ್ರಜ್ಞಾನ

ಟ್ವಿಟರ್ ಹಕ್ಕಿಯನ್ನು ಹರಾಜಿಗಿಟ್ಟ ಮಾಲೀಕ ಎಲಾನ್ ಮಸ್ಕ್!

ವಾಷಿಂಗ್ಟನ್ :  ನಷ್ಟದಲ್ಲಿರುವ ಮೈಕ್ರೊ ಬ್ಲಾಗಿಂಗ್ ತಾಣ ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಈಗ ಕಂಪನಿಯ ಪ್ರಧಾನ ಕಚೇರಿಯಲ್ಲಿರುವ ವಸ್ತುಗಳನ್ನು ಹರಾಜು ಹಾಕಲು ಮುಂದಾಗಿದ್ದಾರೆ. 27 ಗಂಟೆ ಅವಧಿಯ ಆನ್​​ಲೈನ್ ಹರಾಜು ಪ್ರಕ್ರಿಯೆಯನ್ನು ಅವರು ಆರಂಭಿಸಿದ್ದು, ಟ್ವಿಟರ್​ನ ಸ್ಯಾನ್​​ ಫ್ರಾನ್ಸಿಸ್ಕೊದಲ್ಲಿರುವ ಪ್ರಧಾನ ಕಚೇರಿಯ ಪೀಠೋಪಕರಣ, ಅಲಂಕಾರಿಕ ಉಪಕರಣಗಳು, ಅಡುಗೆ ಕೊಠಡಿಗೆ ಸಂಬಂಧಿಸಿದ ಉಪಕರಣಗಳು ಮತ್ತಿತರ ವಸ್ತುಗಳನ್ನು ಹರಾಜಿಗಿಟ್ಟಿದ್ದಾರೆ. ಟ್ವಿಟರ್​ ಹಕ್ಕಿಯ ಪ್ರತಿಮೆಯನ್ನೂ ಹರಾಜಿಗಿಟ್ಟಿದ್ದು, 1 ಲಕ್ಷ ಡಾಲರ್ ಬೆಲೆ ನಿಗದಿಪಡಿಸಿದ್ದಾರೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ. ಒಟ್ಟು 631 ಉಪಕರಣಗಳನ್ನು ಹರಾಜು ಹಾಕಲಾಗುತ್ತಿದ್ದು, ಎಸ್​ಪ್ರೆಸ್ಸೊ ಯಂತ್ರಗಳು, ಮೇಜುಗಳು, ಟಿವಿಗಳು, ಬೈಸಿಕಲ್​, ಚಾರ್ಜಿಂಗ್​ ಸ್ಟೇಷನ್​ಗಳು, ಪಿಜ್ಜಾ ಓವನ್​​ ಕೂಡ ಸೇರಿವೆ.

ಈ ಹರಾಜು ಪ್ರಕ್ರಿಯೆಯಿಂದ ಹಣಕಾಸು ಸ್ಥಿತಿಗೆ ಬಂಧಿಸಿದಂತೆ ಏನೂ ಬದಲಾವಣೆಯಾಗದು ಎಂದು ಹೆರಿಟೇಜ್ ಗ್ಲೋಬಲ್ ಪಾರ್ಟ್ನರ್ಸ್ ಪ್ರತಿನಿಧಿಯೊಬ್ಬರು ಇತ್ತೀಚೆಗೆ ‘ಫಾರ್ಚೂನ್’ ನಿಯತಕಾಲಿಕೆಗೆ ತಿಳಿಸಿದ್ದರು. ಟ್ವಿಟರ್ ಪ್ರಧಾನ ಕಚೇರಿ ವಸ್ತುಗಳ ಹರಾಜು ವಿಚಾರವಾಗಿ ಆಕ್ಷನ್​​ ಹೌಸ್​​ಗಳು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

ಕಂಪನಿಯ ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿರುವ ಮಸ್ಕ್‌ಗೆ ಇದು ಉತ್ತಮ ನಿರ್ಧಾರ ಎನಿಸಬಹುದು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಮತ್ತೊಂದು ಕಚೇರಿಯ ವಿಳಾಸಕ್ಕೆ ಬಾಡಿಗೆ ಪಾವತಿಸಲು ವಿಫಲವಾಗಿರುವ ಬಗ್ಗೆ ಅವರು ಮೊಕದ್ದಮೆಯನ್ನೂ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ಸಿಂಗಾಪುರ ಸೇರಿದಂತೆ ಏಷ್ಯಾ ಪೆಸಿಫಿಕ್ ಪ್ರದೇಶದ ವಿವಿಧೆಡೆ ಇರುವ ಕಚೇರಿಗಳನ್ನೂ ಉಳಿಸಿಕೊಳ್ಳುವುದು ಮಸ್ಕ್ ಅವರಿಗೆ ಸಾಧ್ಯವಾಗಿಲ್ಲ. ಈ ಪ್ರದೇಶಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡಲಾಗಿದೆ ಎಂದು ಇತ್ತೀಚೆಗೆ ‘ಬ್ಲೂಮ್​ಬರ್ಗ್’ ವರದಿ ಮಾಡಿತ್ತು.

ಟ್ವಿಟರ್ ಮಾಲೀಕತ್ವ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಮಸ್ಕ್ ಅವರು ಕಂಪನಿ ಅರ್ಧದಷ್ಟು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದರು. ಆಮೇಲೆ ಬ್ಲೂಟಿಕ್​ಗೆ ಶುಲ್ಕ ವಿಧಿಸಲು ಆರಂಭಿಸಿ ವಾಪಸ್ ಪಡೆದಿದ್ದರು. ಮತ್ತೆ ನಿರ್ಧಾರವನ್ನು ಜಾರಿಗೊಳಿಸಿದ್ದರು. ಟ್ವಿಟರ್ ಸಿಇಒ ಹುದ್ದೆಯಲ್ಲಿ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಟ್ವಿಟರ್​​ನಲ್ಲಿ ಪೋಲ್ ನಡೆಸಿದ್ದರು. ಬಳಿಕ ಕೆಲವೇ ದಿನಗಳಲ್ಲಿ ಹುದ್ದೆ ತ್ಯಜಿಸುವ ಬಗ್ಗೆ ಸುಳಿವು ನೀಡಿದ್ದರು. ಹೀಗೆ, ಟ್ವಿಟರ್ ಖರೀದಿಸಿದ ಬಳಿಕ ಮಸ್ಕ್ ಹಲವು ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಆದಾಯ ವೃದ್ಧಿಸಿಕೊಳ್ಳಲೆಂದು ‘ಯೂಸರ್ ನೇಂ’ಗಳನ್ನು ಹರಾಜಿಗೆ ಇರಿಸಲು ಟ್ವಿಟರ್ ಮುಂದಾಗಿತ್ತು ಎಂಬ ಸಂಗತಿ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು.

andolanait

Share
Published by
andolanait
Tags: Twitter

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago