ವಿಜ್ಞಾನ ತಂತ್ರಜ್ಞಾನ

ಇನ್ಮುಂದೆ ಮೊಬೈಲ್ ಸ್ಕ್ರೀನ್ ನಲ್ಲಿ ಬರಲಿದೆ ಕರೆದಾರರ ಹೆಸರು

ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ.
ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. ಟ್ರಾಯ್ ಇದಕ್ಕೆ ಪರಿಹಾರ ಕಂಡುಹಿಡಿದಿದ್ದು ಇನ್ನು ಮುಂದೆ ಸ್ಕ್ರೀನ್ ಮೇಲೆ ಕರೆ ಮಾಡುವವರ ಹೆಸರು ಬರಲಿದೆ.
ಬಳಕೆದಾರರು ಕರೆ ಸ್ವೀಕರಿಸಿದಾಗ ಕರೆ ಮಾಡುವವರ ಹೆಸರು ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಂಡಿದೆ.
ಟೆಲಿಕಾಂ ಆಪರೇಟರ್ಗಳಲ್ಲಿ ಲಭ್ಯ ವಿರುವ ಚಂದಾದಾರರ ಕೆವೈಸಿ ದಾಖಲೆಯ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ. ಚಂದಾದಾರರು ಕರೆ ಮಾಡಿದವರ ಹೆಸರು ಕಾಂಟ್ಯಾ ಕ್ಟ್ ಲಿಸ್ಟಿನಲ್ಲಿ ಸೇವ್ ಆಗದೇ ಇದ್ದರೂ ಅವರ ಹೆಸರು ಕಾಣಿಸಿಕೊಳ್ಳಲಿದೆ.
ಪ್ರಸ್ತುತ, ಕೆಲವು ಬಳಕೆದಾರರು ಟ್ರೂಕಾಲ್ ನಂತಹ ಅಪ್ಲಿಕೇಶನ್ ಮೂಲಕ ಅಪರಿಚಿತ ಕಾಲರ್ ಗಳ ಗುರುತನ್ನು ತಿಳಿದುಕೊಳ್ಳು ತ್ತಾರೆ. ಆದಾಗ್ಯೂ , ಇದು ಶೇ. ನೂರರಷ್ಟು ಪರಿಪೂರ್ಣವಲ್ಲ. ಆದರೆ ಟ್ರಾಯ್ ನಿಯಮ ಜಾರಿಗೆ ಬಂದ ಬಳಿಕ ಯಾರ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆಯೋ ಅದೇ ಹೆಸರು ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದೆ.

andolanait

Share
Published by
andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago