ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ.
ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. ಟ್ರಾಯ್ ಇದಕ್ಕೆ ಪರಿಹಾರ ಕಂಡುಹಿಡಿದಿದ್ದು ಇನ್ನು ಮುಂದೆ ಸ್ಕ್ರೀನ್ ಮೇಲೆ ಕರೆ ಮಾಡುವವರ ಹೆಸರು ಬರಲಿದೆ.
ಬಳಕೆದಾರರು ಕರೆ ಸ್ವೀಕರಿಸಿದಾಗ ಕರೆ ಮಾಡುವವರ ಹೆಸರು ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಂಡಿದೆ.
ಟೆಲಿಕಾಂ ಆಪರೇಟರ್ಗಳಲ್ಲಿ ಲಭ್ಯ ವಿರುವ ಚಂದಾದಾರರ ಕೆವೈಸಿ ದಾಖಲೆಯ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ. ಚಂದಾದಾರರು ಕರೆ ಮಾಡಿದವರ ಹೆಸರು ಕಾಂಟ್ಯಾ ಕ್ಟ್ ಲಿಸ್ಟಿನಲ್ಲಿ ಸೇವ್ ಆಗದೇ ಇದ್ದರೂ ಅವರ ಹೆಸರು ಕಾಣಿಸಿಕೊಳ್ಳಲಿದೆ.
ಪ್ರಸ್ತುತ, ಕೆಲವು ಬಳಕೆದಾರರು ಟ್ರೂಕಾಲ್ ನಂತಹ ಅಪ್ಲಿಕೇಶನ್ ಮೂಲಕ ಅಪರಿಚಿತ ಕಾಲರ್ ಗಳ ಗುರುತನ್ನು ತಿಳಿದುಕೊಳ್ಳು ತ್ತಾರೆ. ಆದಾಗ್ಯೂ , ಇದು ಶೇ. ನೂರರಷ್ಟು ಪರಿಪೂರ್ಣವಲ್ಲ. ಆದರೆ ಟ್ರಾಯ್ ನಿಯಮ ಜಾರಿಗೆ ಬಂದ ಬಳಿಕ ಯಾರ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆಯೋ ಅದೇ ಹೆಸರು ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…