ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ.
ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. ಟ್ರಾಯ್ ಇದಕ್ಕೆ ಪರಿಹಾರ ಕಂಡುಹಿಡಿದಿದ್ದು ಇನ್ನು ಮುಂದೆ ಸ್ಕ್ರೀನ್ ಮೇಲೆ ಕರೆ ಮಾಡುವವರ ಹೆಸರು ಬರಲಿದೆ.
ಬಳಕೆದಾರರು ಕರೆ ಸ್ವೀಕರಿಸಿದಾಗ ಕರೆ ಮಾಡುವವರ ಹೆಸರು ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಂಡಿದೆ.
ಟೆಲಿಕಾಂ ಆಪರೇಟರ್ಗಳಲ್ಲಿ ಲಭ್ಯ ವಿರುವ ಚಂದಾದಾರರ ಕೆವೈಸಿ ದಾಖಲೆಯ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ. ಚಂದಾದಾರರು ಕರೆ ಮಾಡಿದವರ ಹೆಸರು ಕಾಂಟ್ಯಾ ಕ್ಟ್ ಲಿಸ್ಟಿನಲ್ಲಿ ಸೇವ್ ಆಗದೇ ಇದ್ದರೂ ಅವರ ಹೆಸರು ಕಾಣಿಸಿಕೊಳ್ಳಲಿದೆ.
ಪ್ರಸ್ತುತ, ಕೆಲವು ಬಳಕೆದಾರರು ಟ್ರೂಕಾಲ್ ನಂತಹ ಅಪ್ಲಿಕೇಶನ್ ಮೂಲಕ ಅಪರಿಚಿತ ಕಾಲರ್ ಗಳ ಗುರುತನ್ನು ತಿಳಿದುಕೊಳ್ಳು ತ್ತಾರೆ. ಆದಾಗ್ಯೂ , ಇದು ಶೇ. ನೂರರಷ್ಟು ಪರಿಪೂರ್ಣವಲ್ಲ. ಆದರೆ ಟ್ರಾಯ್ ನಿಯಮ ಜಾರಿಗೆ ಬಂದ ಬಳಿಕ ಯಾರ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆಯೋ ಅದೇ ಹೆಸರು ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದೆ.
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…