ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ.
ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. ಟ್ರಾಯ್ ಇದಕ್ಕೆ ಪರಿಹಾರ ಕಂಡುಹಿಡಿದಿದ್ದು ಇನ್ನು ಮುಂದೆ ಸ್ಕ್ರೀನ್ ಮೇಲೆ ಕರೆ ಮಾಡುವವರ ಹೆಸರು ಬರಲಿದೆ.
ಬಳಕೆದಾರರು ಕರೆ ಸ್ವೀಕರಿಸಿದಾಗ ಕರೆ ಮಾಡುವವರ ಹೆಸರು ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಂಡಿದೆ.
ಟೆಲಿಕಾಂ ಆಪರೇಟರ್ಗಳಲ್ಲಿ ಲಭ್ಯ ವಿರುವ ಚಂದಾದಾರರ ಕೆವೈಸಿ ದಾಖಲೆಯ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ. ಚಂದಾದಾರರು ಕರೆ ಮಾಡಿದವರ ಹೆಸರು ಕಾಂಟ್ಯಾ ಕ್ಟ್ ಲಿಸ್ಟಿನಲ್ಲಿ ಸೇವ್ ಆಗದೇ ಇದ್ದರೂ ಅವರ ಹೆಸರು ಕಾಣಿಸಿಕೊಳ್ಳಲಿದೆ.
ಪ್ರಸ್ತುತ, ಕೆಲವು ಬಳಕೆದಾರರು ಟ್ರೂಕಾಲ್ ನಂತಹ ಅಪ್ಲಿಕೇಶನ್ ಮೂಲಕ ಅಪರಿಚಿತ ಕಾಲರ್ ಗಳ ಗುರುತನ್ನು ತಿಳಿದುಕೊಳ್ಳು ತ್ತಾರೆ. ಆದಾಗ್ಯೂ , ಇದು ಶೇ. ನೂರರಷ್ಟು ಪರಿಪೂರ್ಣವಲ್ಲ. ಆದರೆ ಟ್ರಾಯ್ ನಿಯಮ ಜಾರಿಗೆ ಬಂದ ಬಳಿಕ ಯಾರ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆಯೋ ಅದೇ ಹೆಸರು ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…