ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ.
ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. ಟ್ರಾಯ್ ಇದಕ್ಕೆ ಪರಿಹಾರ ಕಂಡುಹಿಡಿದಿದ್ದು ಇನ್ನು ಮುಂದೆ ಸ್ಕ್ರೀನ್ ಮೇಲೆ ಕರೆ ಮಾಡುವವರ ಹೆಸರು ಬರಲಿದೆ.
ಬಳಕೆದಾರರು ಕರೆ ಸ್ವೀಕರಿಸಿದಾಗ ಕರೆ ಮಾಡುವವರ ಹೆಸರು ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಂಡಿದೆ.
ಟೆಲಿಕಾಂ ಆಪರೇಟರ್ಗಳಲ್ಲಿ ಲಭ್ಯ ವಿರುವ ಚಂದಾದಾರರ ಕೆವೈಸಿ ದಾಖಲೆಯ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ. ಚಂದಾದಾರರು ಕರೆ ಮಾಡಿದವರ ಹೆಸರು ಕಾಂಟ್ಯಾ ಕ್ಟ್ ಲಿಸ್ಟಿನಲ್ಲಿ ಸೇವ್ ಆಗದೇ ಇದ್ದರೂ ಅವರ ಹೆಸರು ಕಾಣಿಸಿಕೊಳ್ಳಲಿದೆ.
ಪ್ರಸ್ತುತ, ಕೆಲವು ಬಳಕೆದಾರರು ಟ್ರೂಕಾಲ್ ನಂತಹ ಅಪ್ಲಿಕೇಶನ್ ಮೂಲಕ ಅಪರಿಚಿತ ಕಾಲರ್ ಗಳ ಗುರುತನ್ನು ತಿಳಿದುಕೊಳ್ಳು ತ್ತಾರೆ. ಆದಾಗ್ಯೂ , ಇದು ಶೇ. ನೂರರಷ್ಟು ಪರಿಪೂರ್ಣವಲ್ಲ. ಆದರೆ ಟ್ರಾಯ್ ನಿಯಮ ಜಾರಿಗೆ ಬಂದ ಬಳಿಕ ಯಾರ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆಯೋ ಅದೇ ಹೆಸರು ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…