ವಿಜ್ಞಾನ ತಂತ್ರಜ್ಞಾನ

‘ವಾಟ್ಸ್‌ಆ್ಯಪ್ ಪೇ’ ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ರಾಜೀನಾಮೆ

ನವದೆಹಲಿ: ‘ವಾಟ್ಸ್‌ಆ್ಯಪ್ ಪೇ’ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಡ್ತಿ ಪಡೆದ ನಾಲ್ಕೇ ತಿಂಗಳಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.  ನವೆಂಬರ್‌ನಲ್ಲಿ ಮೆಟಾ ಕಂಪನಿಯ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಪದ ತ್ಯಾಗದ ಬಳಿಕ ಒಂದೂವರೆ ತಿಂಗಳಲ್ಲಿ ಆದ ನಾಲ್ಕನೇ ಉನ್ನತ ಹುದ್ದೆಯ ರಾಜೀನಾಮೆ ಇದಾಗಿದೆ.

ಮೋಹನ್ ರಾಜೀನಾಮೆ ಬಳಿಕ ವಾಟ್ಸ್‌ಆ್ಯಪ್ ಇಂಡಿಯಾ ಮುಖ್ಯಸ್ಥರಾಗಿದ್ದ ಅಭಿಜಿತ್ ಬೋಸ್, ಮೆಟಾ ಇಂಡಿಯಾ ಪಬ್ಲಿಕ್ ಪಾಲಿಸಿ ಮುಖ್ಯಸ್ಥ ರಾಜೀವ್ ಅಗರ್‌ವಾಲ್ ಸಹ ರಾಜೀನಾಮೆ ಸಲ್ಲಿಸಿದ್ದರು. ವಾಟ್ಸ್‌ಆ್ಯಪ್‌ ಕಂಪನಿಯಿಂದ ಹೊರಬರುತ್ತಿರುವ ಮಾಹಿತಿಯನ್ನು ಚೊಲೆಟ್ಟಿ, ಲಿಂಕ್ಡ್ಇನ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಇಂದು ವಾಟ್ಸ್‌ಆ್ಯಪ್‌ ಪೇನಲ್ಲಿ ನನ್ನ ಕೊನೆಯ ದಿನವಾಗಿತ್ತು. ಭಾರತದಲ್ಲಿ ವಾಟ್ಸ್‌ಆ್ಯಪ್ ಪ್ರಭಾವ ಮತ್ತು ಅದರ ವ್ಯಾಪ್ತಿ ನೋಡಿದ್ದು ಉತ್ತಮ ಅನುಭವವಾಗಿದೆ’ ಎಂದು ಬುಧವಾರ ಮಾಡಿರುವ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 2021ರಂದು ಚೊಲೆಟ್ಟಿ ಅಮೇಜಾನ್ ಬಿಟ್ಟು ವಾಟ್ಸ್‌ಆ್ಯಪ್ ಸೇರಿದ್ದರು.

andolanait

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

3 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

23 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

2 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

2 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

3 hours ago