ನವದೆಹಲಿ: ‘ವಾಟ್ಸ್ಆ್ಯಪ್ ಪೇ’ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಡ್ತಿ ಪಡೆದ ನಾಲ್ಕೇ ತಿಂಗಳಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ನಲ್ಲಿ ಮೆಟಾ ಕಂಪನಿಯ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಪದ ತ್ಯಾಗದ ಬಳಿಕ ಒಂದೂವರೆ ತಿಂಗಳಲ್ಲಿ ಆದ ನಾಲ್ಕನೇ ಉನ್ನತ ಹುದ್ದೆಯ ರಾಜೀನಾಮೆ ಇದಾಗಿದೆ.
ಮೋಹನ್ ರಾಜೀನಾಮೆ ಬಳಿಕ ವಾಟ್ಸ್ಆ್ಯಪ್ ಇಂಡಿಯಾ ಮುಖ್ಯಸ್ಥರಾಗಿದ್ದ ಅಭಿಜಿತ್ ಬೋಸ್, ಮೆಟಾ ಇಂಡಿಯಾ ಪಬ್ಲಿಕ್ ಪಾಲಿಸಿ ಮುಖ್ಯಸ್ಥ ರಾಜೀವ್ ಅಗರ್ವಾಲ್ ಸಹ ರಾಜೀನಾಮೆ ಸಲ್ಲಿಸಿದ್ದರು. ವಾಟ್ಸ್ಆ್ಯಪ್ ಕಂಪನಿಯಿಂದ ಹೊರಬರುತ್ತಿರುವ ಮಾಹಿತಿಯನ್ನು ಚೊಲೆಟ್ಟಿ, ಲಿಂಕ್ಡ್ಇನ್ನಲ್ಲಿ ಹಂಚಿಕೊಂಡಿದ್ದಾರೆ.
‘ಇಂದು ವಾಟ್ಸ್ಆ್ಯಪ್ ಪೇನಲ್ಲಿ ನನ್ನ ಕೊನೆಯ ದಿನವಾಗಿತ್ತು. ಭಾರತದಲ್ಲಿ ವಾಟ್ಸ್ಆ್ಯಪ್ ಪ್ರಭಾವ ಮತ್ತು ಅದರ ವ್ಯಾಪ್ತಿ ನೋಡಿದ್ದು ಉತ್ತಮ ಅನುಭವವಾಗಿದೆ’ ಎಂದು ಬುಧವಾರ ಮಾಡಿರುವ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 2021ರಂದು ಚೊಲೆಟ್ಟಿ ಅಮೇಜಾನ್ ಬಿಟ್ಟು ವಾಟ್ಸ್ಆ್ಯಪ್ ಸೇರಿದ್ದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…