ನವದೆಹಲಿ: ‘ವಾಟ್ಸ್ಆ್ಯಪ್ ಪೇ’ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಡ್ತಿ ಪಡೆದ ನಾಲ್ಕೇ ತಿಂಗಳಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ನಲ್ಲಿ ಮೆಟಾ ಕಂಪನಿಯ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಪದ ತ್ಯಾಗದ ಬಳಿಕ ಒಂದೂವರೆ ತಿಂಗಳಲ್ಲಿ ಆದ ನಾಲ್ಕನೇ ಉನ್ನತ ಹುದ್ದೆಯ ರಾಜೀನಾಮೆ ಇದಾಗಿದೆ.
ಮೋಹನ್ ರಾಜೀನಾಮೆ ಬಳಿಕ ವಾಟ್ಸ್ಆ್ಯಪ್ ಇಂಡಿಯಾ ಮುಖ್ಯಸ್ಥರಾಗಿದ್ದ ಅಭಿಜಿತ್ ಬೋಸ್, ಮೆಟಾ ಇಂಡಿಯಾ ಪಬ್ಲಿಕ್ ಪಾಲಿಸಿ ಮುಖ್ಯಸ್ಥ ರಾಜೀವ್ ಅಗರ್ವಾಲ್ ಸಹ ರಾಜೀನಾಮೆ ಸಲ್ಲಿಸಿದ್ದರು. ವಾಟ್ಸ್ಆ್ಯಪ್ ಕಂಪನಿಯಿಂದ ಹೊರಬರುತ್ತಿರುವ ಮಾಹಿತಿಯನ್ನು ಚೊಲೆಟ್ಟಿ, ಲಿಂಕ್ಡ್ಇನ್ನಲ್ಲಿ ಹಂಚಿಕೊಂಡಿದ್ದಾರೆ.
‘ಇಂದು ವಾಟ್ಸ್ಆ್ಯಪ್ ಪೇನಲ್ಲಿ ನನ್ನ ಕೊನೆಯ ದಿನವಾಗಿತ್ತು. ಭಾರತದಲ್ಲಿ ವಾಟ್ಸ್ಆ್ಯಪ್ ಪ್ರಭಾವ ಮತ್ತು ಅದರ ವ್ಯಾಪ್ತಿ ನೋಡಿದ್ದು ಉತ್ತಮ ಅನುಭವವಾಗಿದೆ’ ಎಂದು ಬುಧವಾರ ಮಾಡಿರುವ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 2021ರಂದು ಚೊಲೆಟ್ಟಿ ಅಮೇಜಾನ್ ಬಿಟ್ಟು ವಾಟ್ಸ್ಆ್ಯಪ್ ಸೇರಿದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…