ಭಾರತದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ 26.85 ಲಕ್ಷ ವಾಟ್ಸಪ್ ಖಾತೆಗಳನ್ನು ನಿರ್ಬಂಧಿಸಲಾಗಿದೆ
ನವದೆಹಲಿ: ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್ನಲ್ಲಿ ನಿಷೇಧಿಸಲಾದ 23.28 ಲಕ್ಷ ಖಾತೆಗಳಿಗೆ ಹೋಲಿಸಿದರೆ ಸೆಪ್ಟೆಂಬರ್ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ 15 ಪ್ರತಿಶತ ಹೆಚ್ಚಾಗಿದೆ ಎಂದು ಹೇಳಿದೆ.
1 ಸೆಪ್ಟೆಂಬರ್, 2022 ಮತ್ತು 30 ಸೆಪ್ಟೆಂಬರ್, 2022 ರ ನಡುವೆ 26,85,000 ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಇದರಲ್ಲಿ 8,72,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸ್ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಯೂಸರ್ ಸೇಫ್ಟಿ ರಿಪೋರ್ಟ್ನಲ್ಲಿ ತಿಳಿಸಿದೆ.ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಾವಳಿಗಳ ಪ್ರಕಾರ, ಬೃಹತ್ ಗಾತ್ರದ ಡಿಜಿಟಲ್ ಕಂಪನಿಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ತಮಗೆ ಬಂದ ದೂರುಗಳು ಮತ್ತು ಅವುಗಳ ಮೇಲೆ ಕ್ರಮ ತೆಗೆದುಕೊಂಡ ಬಗ್ಗೆ ಅನುಸರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.
ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್ಫಾರ್ಮ್ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಕಾರಣದಿಂದ ತೀವ್ರ ಟೀಕೆಗೊಳಗಾಗಿದ್ದವು. ಡಿಜಿಟಲ್ ಪ್ಲಾಟ್ಫಾರ್ಮ್ಗಳು ಕಂಟೆಂಟ್ ತೆಗೆದು ಹಾಕುವಲ್ಲಿ ಮತ್ತು ಬಳಕೆದಾರರನ್ನು ನಿಷೇಧಿಸುವಲ್ಲಿ ನಿರಂಕುಶವಾಗಿ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ ಎಂದು ಬಹುದೊಡ್ಡ ಸಂಖ್ಯೆಯ ಬಳಕೆದಾರರು ಆರೋಪಿಸಿದ್ದಾರೆ
ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿತ್ತು. ಇತ್ತೀಚಿನ ವಾಟ್ಸ್ಆ್ಯಪ್ ವರದಿಯ ಪ್ರಕಾರ, ಅದು ಸೆಪ್ಟೆಂಬರ್ನಲ್ಲಿ 666 ದೂರುಗಳನ್ನು ಸ್ವೀಕರಿಸಿದೆ ಮತ್ತು 23 ದೂರುಗಳ ವಿಚಾರದಲ್ಲಿ ಮಾತ್ರ ಕ್ರಮ ಕೈಗೊಂಡಿದೆ
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…