ವಿಜ್ಞಾನ ತಂತ್ರಜ್ಞಾನ

ಸೆಪ್ಟೆಂಬರ್‌ ತಿಂಗಳಲ್ಲಿ ಭಾರತದ 26.85 ಲಕ್ಷ ವಾಟ್ಸಪ್‌ ಖಾತೆಗಳಿಗೆ ನಿರ್ಬಂಧ

ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ 26.85 ಲಕ್ಷ ವಾಟ್ಸಪ್‌ ಖಾತೆಗಳನ್ನು ನಿರ್ಬಂಧಿಸಲಾಗಿದೆ

ನವದೆಹಲಿ: ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ನಿಷೇಧಿಸಲಾದ 23.28 ಲಕ್ಷ ಖಾತೆಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ 15 ಪ್ರತಿಶತ ಹೆಚ್ಚಾಗಿದೆ ಎಂದು ಹೇಳಿದೆ.
1 ಸೆಪ್ಟೆಂಬರ್, 2022 ಮತ್ತು 30 ಸೆಪ್ಟೆಂಬರ್, 2022 ರ ನಡುವೆ 26,85,000 ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಇದರಲ್ಲಿ 8,72,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸ್​ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಯೂಸರ್ ಸೇಫ್ಟಿ ರಿಪೋರ್ಟ್​ನಲ್ಲಿ ತಿಳಿಸಿದೆ.ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಾವಳಿಗಳ ಪ್ರಕಾರ, ಬೃಹತ್ ಗಾತ್ರದ ಡಿಜಿಟಲ್ ಕಂಪನಿಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ತಮಗೆ ಬಂದ ದೂರುಗಳು ಮತ್ತು ಅವುಗಳ ಮೇಲೆ ಕ್ರಮ ತೆಗೆದುಕೊಂಡ ಬಗ್ಗೆ ಅನುಸರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.

ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಕಾರಣದಿಂದ ತೀವ್ರ ಟೀಕೆಗೊಳಗಾಗಿದ್ದವು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಂಟೆಂಟ್ ತೆಗೆದು ಹಾಕುವಲ್ಲಿ ಮತ್ತು ಬಳಕೆದಾರರನ್ನು ನಿಷೇಧಿಸುವಲ್ಲಿ ನಿರಂಕುಶವಾಗಿ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ ಎಂದು ಬಹುದೊಡ್ಡ ಸಂಖ್ಯೆಯ ಬಳಕೆದಾರರು ಆರೋಪಿಸಿದ್ದಾರೆ

ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್‌ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿತ್ತು. ಇತ್ತೀಚಿನ ವಾಟ್ಸ್​ಆ್ಯಪ್ ವರದಿಯ ಪ್ರಕಾರ, ಅದು ಸೆಪ್ಟೆಂಬರ್‌ನಲ್ಲಿ 666 ದೂರುಗಳನ್ನು ಸ್ವೀಕರಿಸಿದೆ ಮತ್ತು 23 ದೂರುಗಳ ವಿಚಾರದಲ್ಲಿ ಮಾತ್ರ ಕ್ರಮ ಕೈಗೊಂಡಿದೆ

andolanait

Share
Published by
andolanait
Tags: ಭಾರತ

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago