ವಿಜ್ಞಾನ ತಂತ್ರಜ್ಞಾನ

ಸೆಪ್ಟೆಂಬರ್‌ ತಿಂಗಳಲ್ಲಿ ಭಾರತದ 26.85 ಲಕ್ಷ ವಾಟ್ಸಪ್‌ ಖಾತೆಗಳಿಗೆ ನಿರ್ಬಂಧ

ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ 26.85 ಲಕ್ಷ ವಾಟ್ಸಪ್‌ ಖಾತೆಗಳನ್ನು ನಿರ್ಬಂಧಿಸಲಾಗಿದೆ

ನವದೆಹಲಿ: ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ನಿಷೇಧಿಸಲಾದ 23.28 ಲಕ್ಷ ಖಾತೆಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ 15 ಪ್ರತಿಶತ ಹೆಚ್ಚಾಗಿದೆ ಎಂದು ಹೇಳಿದೆ.
1 ಸೆಪ್ಟೆಂಬರ್, 2022 ಮತ್ತು 30 ಸೆಪ್ಟೆಂಬರ್, 2022 ರ ನಡುವೆ 26,85,000 ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಇದರಲ್ಲಿ 8,72,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸ್​ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಯೂಸರ್ ಸೇಫ್ಟಿ ರಿಪೋರ್ಟ್​ನಲ್ಲಿ ತಿಳಿಸಿದೆ.ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಾವಳಿಗಳ ಪ್ರಕಾರ, ಬೃಹತ್ ಗಾತ್ರದ ಡಿಜಿಟಲ್ ಕಂಪನಿಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ತಮಗೆ ಬಂದ ದೂರುಗಳು ಮತ್ತು ಅವುಗಳ ಮೇಲೆ ಕ್ರಮ ತೆಗೆದುಕೊಂಡ ಬಗ್ಗೆ ಅನುಸರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.

ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಕಾರಣದಿಂದ ತೀವ್ರ ಟೀಕೆಗೊಳಗಾಗಿದ್ದವು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಂಟೆಂಟ್ ತೆಗೆದು ಹಾಕುವಲ್ಲಿ ಮತ್ತು ಬಳಕೆದಾರರನ್ನು ನಿಷೇಧಿಸುವಲ್ಲಿ ನಿರಂಕುಶವಾಗಿ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ ಎಂದು ಬಹುದೊಡ್ಡ ಸಂಖ್ಯೆಯ ಬಳಕೆದಾರರು ಆರೋಪಿಸಿದ್ದಾರೆ

ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್‌ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿತ್ತು. ಇತ್ತೀಚಿನ ವಾಟ್ಸ್​ಆ್ಯಪ್ ವರದಿಯ ಪ್ರಕಾರ, ಅದು ಸೆಪ್ಟೆಂಬರ್‌ನಲ್ಲಿ 666 ದೂರುಗಳನ್ನು ಸ್ವೀಕರಿಸಿದೆ ಮತ್ತು 23 ದೂರುಗಳ ವಿಚಾರದಲ್ಲಿ ಮಾತ್ರ ಕ್ರಮ ಕೈಗೊಂಡಿದೆ

andolanait

Share
Published by
andolanait
Tags: ಭಾರತ

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

4 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

5 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago