ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಪರಿಚಯಿಸಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ. ಈ ಫೀಚರ್ ಅನ್ನು ಗ್ರೂಪ್ಗಳ ಗ್ರೂಪ್ ಎಂದು ಹೇಳಬಹುದು. ಅಂದರೆ ವಾಟ್ಸ್ಆ್ಯಪ್ನಲ್ಲಿ ಆಡ್ಮಿನ್ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ.
ವಾಟ್ಸ್ಆ್ಯಪ್ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ. ಇದೇ ರೀತಿಯಲ್ಲಿ ಕಮ್ಯೂನಿಟಿ ಕಳುಹಿಸುವ ಕಂಪ್ಲೀಟ್ ಅಪ್ಡೇಟ್ಗಳನ್ನು ಜನರು ಸ್ವೀಕರಿಸಬಹುದು. ಜೊತೆಗೆ ಕಮ್ಯೂನಿಟಿ ಗ್ರೂಪ್ನಲ್ಲಿ ಮುಖ್ಯವಾದವುಗಳ ಕುರಿತು ಸಣ್ಣ ಚರ್ಚಾ ಗುಂಪುಗಳನ್ನು ಸುಲಭವಾಗಿ ಸಂಘಟಿಸಬಹುದು. ಇದರಲ್ಲಿ, ಅನೇಕ ಗುಂಪುಗಳನ್ನು ಏಕಕಾಲದಲ್ಲಿ ಸೇರಿಸಬಹುದು ಮತ್ತು ನೀವು ಎಲ್ಲಾ ಗುಂಪುಗಳ ನವೀಕರಣಗಳನ್ನು ಒಂದೇ ಸ್ಥಳದಲ್ಲಿ ಪಡೆಯುತ್ತೀರಿ.
ಉದಾಹರಣೆಗೆ, ಶಾಲಾ ಮಕ್ಕಳು ಕಡ್ಡಾಯವಾಗಿ ಓದಬೇಕಾದ ವಿಷಯಗಳನ್ನು ಹಂಚಿಕೊಳ್ಳಲು ಎಲ್ಲಾ ಪೋಷಕರನ್ನು ಒಟ್ಟಿಗೆ ಸೇರಿಸಬಹುದು ಮತ್ತು ನಿರ್ದಿಷ್ಟ ತರಗತಿಗಳು, ಪಠ್ಯೇತರ ಚಟುವಟಿಕೆಗಳು ಅಥವಾ ಸ್ವಯಂಸೇವಕ ಅಗತ್ಯಗಳ ಬಗ್ಗೆ ಗುಂಪುಗಳನ್ನು ಹೊಂದಿಸಬಹುದಾಗಿದೆ. ಈ ಗುಂಪುಗಳು ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್ಗಳಾಗಿ ಕಾರ್ಯನಿರ್ವಹಿಸಲಿವೆ. ವಾಟ್ಸ್ಆ್ಯಪ್ನಲ್ಲಿನ ಪ್ರತಿಯೊಂದು ಕಮ್ಯೂನಿಟಿ ಗುಂಪುಗಳ ವಿವರಣೆ ಮತ್ತು ಮೆನುವನ್ನು ಹೊಂದಿರುತ್ತದೆ. ಅಲ್ಲದೆ ನೀವು ಯಾವ ಜನರು ಕಮ್ಯೂನಿಟಿ ಸೇರಬಹುದು ಅನ್ನೊದನ್ನ ಆಯ್ಕೆ ಮಾಡಬಹುದು.
ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್ಆ್ಯಪ್ ಗ್ರೂಪ್ಗಳಂತೆ ಈ ಗ್ರೂಪ್ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್ಗಳ ಫೀಚರ್ ತರಲಾಗಿದೆ.
ಈ ಹೊಸ ಫೀಚರ್ನಲ್ಲಿ ಇರುವ ಸಂದೇಶಗಳು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಅನ್ನು ಸಹ ಪಡೆಯುತ್ತವೆ. ಇದಲ್ಲದೆ, ಈಗಾಗಲೇ ಹೇಳಿರುವಂತೆ ಬಳಕೆದಾರರ ಪ್ರೈವೆಸಿಯನ್ನು ರಕ್ಷಿಸಲು ವಾಟ್ಸ್ಆ್ಯಪ್ ಕಮ್ಯೂನಿಟಿ ಫೋನ್ ಸಂಖ್ಯೆಗಳನ್ನು ಹೈಡ್ ಮಾಡುತ್ತದೆ. ಟೆಲಿಗ್ರಾಮ್ ಚಾನೆಲ್ಗಳ ಮಾದರಿಯಲ್ಲಿ ವಾಟ್ಸ್ಆ್ಯಪ್ ಗ್ರೂಪಿನ ವಿಸ್ತಾರವನ್ನು ಮಿತಿಗೊಳಿಸುತ್ತದೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…