ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಪರಿಚಯಿಸಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ. ಈ ಫೀಚರ್ ಅನ್ನು ಗ್ರೂಪ್ಗಳ ಗ್ರೂಪ್ ಎಂದು ಹೇಳಬಹುದು. ಅಂದರೆ ವಾಟ್ಸ್ಆ್ಯಪ್ನಲ್ಲಿ ಆಡ್ಮಿನ್ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ.
ವಾಟ್ಸ್ಆ್ಯಪ್ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ. ಇದೇ ರೀತಿಯಲ್ಲಿ ಕಮ್ಯೂನಿಟಿ ಕಳುಹಿಸುವ ಕಂಪ್ಲೀಟ್ ಅಪ್ಡೇಟ್ಗಳನ್ನು ಜನರು ಸ್ವೀಕರಿಸಬಹುದು. ಜೊತೆಗೆ ಕಮ್ಯೂನಿಟಿ ಗ್ರೂಪ್ನಲ್ಲಿ ಮುಖ್ಯವಾದವುಗಳ ಕುರಿತು ಸಣ್ಣ ಚರ್ಚಾ ಗುಂಪುಗಳನ್ನು ಸುಲಭವಾಗಿ ಸಂಘಟಿಸಬಹುದು. ಇದರಲ್ಲಿ, ಅನೇಕ ಗುಂಪುಗಳನ್ನು ಏಕಕಾಲದಲ್ಲಿ ಸೇರಿಸಬಹುದು ಮತ್ತು ನೀವು ಎಲ್ಲಾ ಗುಂಪುಗಳ ನವೀಕರಣಗಳನ್ನು ಒಂದೇ ಸ್ಥಳದಲ್ಲಿ ಪಡೆಯುತ್ತೀರಿ.
ಉದಾಹರಣೆಗೆ, ಶಾಲಾ ಮಕ್ಕಳು ಕಡ್ಡಾಯವಾಗಿ ಓದಬೇಕಾದ ವಿಷಯಗಳನ್ನು ಹಂಚಿಕೊಳ್ಳಲು ಎಲ್ಲಾ ಪೋಷಕರನ್ನು ಒಟ್ಟಿಗೆ ಸೇರಿಸಬಹುದು ಮತ್ತು ನಿರ್ದಿಷ್ಟ ತರಗತಿಗಳು, ಪಠ್ಯೇತರ ಚಟುವಟಿಕೆಗಳು ಅಥವಾ ಸ್ವಯಂಸೇವಕ ಅಗತ್ಯಗಳ ಬಗ್ಗೆ ಗುಂಪುಗಳನ್ನು ಹೊಂದಿಸಬಹುದಾಗಿದೆ. ಈ ಗುಂಪುಗಳು ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್ಗಳಾಗಿ ಕಾರ್ಯನಿರ್ವಹಿಸಲಿವೆ. ವಾಟ್ಸ್ಆ್ಯಪ್ನಲ್ಲಿನ ಪ್ರತಿಯೊಂದು ಕಮ್ಯೂನಿಟಿ ಗುಂಪುಗಳ ವಿವರಣೆ ಮತ್ತು ಮೆನುವನ್ನು ಹೊಂದಿರುತ್ತದೆ. ಅಲ್ಲದೆ ನೀವು ಯಾವ ಜನರು ಕಮ್ಯೂನಿಟಿ ಸೇರಬಹುದು ಅನ್ನೊದನ್ನ ಆಯ್ಕೆ ಮಾಡಬಹುದು.
ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್ಆ್ಯಪ್ ಗ್ರೂಪ್ಗಳಂತೆ ಈ ಗ್ರೂಪ್ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್ಗಳ ಫೀಚರ್ ತರಲಾಗಿದೆ.
ಈ ಹೊಸ ಫೀಚರ್ನಲ್ಲಿ ಇರುವ ಸಂದೇಶಗಳು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಅನ್ನು ಸಹ ಪಡೆಯುತ್ತವೆ. ಇದಲ್ಲದೆ, ಈಗಾಗಲೇ ಹೇಳಿರುವಂತೆ ಬಳಕೆದಾರರ ಪ್ರೈವೆಸಿಯನ್ನು ರಕ್ಷಿಸಲು ವಾಟ್ಸ್ಆ್ಯಪ್ ಕಮ್ಯೂನಿಟಿ ಫೋನ್ ಸಂಖ್ಯೆಗಳನ್ನು ಹೈಡ್ ಮಾಡುತ್ತದೆ. ಟೆಲಿಗ್ರಾಮ್ ಚಾನೆಲ್ಗಳ ಮಾದರಿಯಲ್ಲಿ ವಾಟ್ಸ್ಆ್ಯಪ್ ಗ್ರೂಪಿನ ವಿಸ್ತಾರವನ್ನು ಮಿತಿಗೊಳಿಸುತ್ತದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…