ಕ್ರೀಡೆ

ಐಪಿಎಲ್‌ 2024: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಫೀಲ್ಡಿಂಗ್ ಆಯ್ದುಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅಬ್ಬರದ ಬ್ಯಾಟಿಂಗ್‌ನಿಂದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ 197 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟನ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 199 ರನ್‌ ಕಲೆಹಾಕಿದೆ.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ ಕಣಕ್ಕಿಳಿದರು. ಜೈಸ್ವಾಲ್‌ 24 (19) ರನ್‌ ಗಳಿಸಿದರೆ, ಬಟ್ಲರ್‌ 8 (10) ರನ್‌ ಗಳಿಸಿ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಜತೆಯಾದ ಸಂಜು ಸಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ 130 ರನ್‌ಗಳ ಅಬ್ಬರದ ಜತೆಯಾಟವಾಡಿದರು. ರಿಯಾನ್‌ ಪರಾಗ್‌ 76 (48) ರನ್‌ ಬಾರಿಸಿ ಔಟ್‌ ಆದರೆ, ನಾಯಕ ಸಂಜು ಸಾಮ್ಸನ್‌ ಅಜೇಯ 68 (38) ರನ್‌ ಬಾರಿಸಿದರು ಮತ್ತು ಶಿಮ್ರಾನ್‌ ಹೆಟ್ಮೈರ್‌ ಅಜೇಯ 13 (5) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಮೋಹಿತ್‌ ಶರ್ಮಾ, ರಶೀದ್‌ ಖಾನ್‌ ಹಾಗೂ ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಸಾಯಿ ಸುದರ್ಶನ್‌ ಹಾಗೂ ನಾಯಕ ಶುಭ್‌ಮನ್‌ ಗಿಲ್‌ ಆರಂಭಿಕರಾಗಿ ಕಣಕ್ಕಿಳಿದರು. ಸಾಯಿ ಸುದರ್ಶನ್‌ 35 (29) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಜವಾಬ್ದಾರಿಯುತ ಆಟವನ್ನಾಡಿದ ಶುಭ್‌ಮನ್‌ ಗಿಲ್‌ 72 (44) ರನ್‌ ಬಾರಿಸಿದರು. ಇನ್ನುಳಿದಂತೆ ಮ್ಯಾಥ್ಯೂ ವೇಡ್‌ 4 (6) ರನ್‌, ಅಭಿನವ್‌ ಮನೋಹರ್‌ 1 (2) ರನ್‌, ವಿಜಯ್‌ ಶಂಕರ್‌ 16 (10) ರನ್‌, ಶಾರುಖ್‌ ಖಾನ್‌ 14 (8) ರನ್‌ ಗಳಿಸಿದರು. ಅಂತಿಮ ಹಂತದಲ್ಲಿ ಉತ್ತಮ ಆಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದ ರಾಹುಲ್‌ ತೆವಾಟಿಯಾ 22 (11) ರನ್‌ ಹಾಗೂ ರಶೀದ್‌ ಖಾನ್‌ ಅಜೇಯ 24 (11) ರನ್‌ ಗಳಿಸಿದರು. ಯಾವುದೇ ಎಸೆತ ಎದುರಿಸಿದ ನೂರ್‌ ಅಹ್ಮದ್‌ ಅಜೇಯರಾಗಿ ಉಳಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ಕುಲ್‌ದೀಪ್ ಸೇನ್‌ 3 ವಿಕೆಟ್‌, ಯುಜ್ವೇಂದ್ರ ಚಹಲ್‌ 2 ವಿಕೆಟ್‌ ಹಾಗೂ ಅವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

2 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

2 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

3 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

4 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

4 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

5 hours ago