ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ವಿಕೆಟ್ಗಳ ಗೆಲುವನ್ನು ಕಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಫೀಲ್ಡಿಂಗ್ ಆಯ್ದುಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅಬ್ಬರದ ಬ್ಯಾಟಿಂಗ್ನಿಂದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ 197 ರನ್ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿದೆ.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಕಣಕ್ಕಿಳಿದರು. ಜೈಸ್ವಾಲ್ 24 (19) ರನ್ ಗಳಿಸಿದರೆ, ಬಟ್ಲರ್ 8 (10) ರನ್ ಗಳಿಸಿ ನಿರ್ಗಮಿಸಿದರು. ಮೂರನೇ ವಿಕೆಟ್ಗೆ ಜತೆಯಾದ ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ 130 ರನ್ಗಳ ಅಬ್ಬರದ ಜತೆಯಾಟವಾಡಿದರು. ರಿಯಾನ್ ಪರಾಗ್ 76 (48) ರನ್ ಬಾರಿಸಿ ಔಟ್ ಆದರೆ, ನಾಯಕ ಸಂಜು ಸಾಮ್ಸನ್ ಅಜೇಯ 68 (38) ರನ್ ಬಾರಿಸಿದರು ಮತ್ತು ಶಿಮ್ರಾನ್ ಹೆಟ್ಮೈರ್ ಅಜೇಯ 13 (5) ರನ್ ಕಲೆಹಾಕಿದರು.
ಗುಜರಾತ್ ಟೈಟನ್ಸ್ ಪರ ಮೋಹಿತ್ ಶರ್ಮಾ, ರಶೀದ್ ಖಾನ್ ಹಾಗೂ ಉಮೇಶ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ತಂಡದ ಪರ ಸಾಯಿ ಸುದರ್ಶನ್ ಹಾಗೂ ನಾಯಕ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರು. ಸಾಯಿ ಸುದರ್ಶನ್ 35 (29) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಜವಾಬ್ದಾರಿಯುತ ಆಟವನ್ನಾಡಿದ ಶುಭ್ಮನ್ ಗಿಲ್ 72 (44) ರನ್ ಬಾರಿಸಿದರು. ಇನ್ನುಳಿದಂತೆ ಮ್ಯಾಥ್ಯೂ ವೇಡ್ 4 (6) ರನ್, ಅಭಿನವ್ ಮನೋಹರ್ 1 (2) ರನ್, ವಿಜಯ್ ಶಂಕರ್ 16 (10) ರನ್, ಶಾರುಖ್ ಖಾನ್ 14 (8) ರನ್ ಗಳಿಸಿದರು. ಅಂತಿಮ ಹಂತದಲ್ಲಿ ಉತ್ತಮ ಆಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದ ರಾಹುಲ್ ತೆವಾಟಿಯಾ 22 (11) ರನ್ ಹಾಗೂ ರಶೀದ್ ಖಾನ್ ಅಜೇಯ 24 (11) ರನ್ ಗಳಿಸಿದರು. ಯಾವುದೇ ಎಸೆತ ಎದುರಿಸಿದ ನೂರ್ ಅಹ್ಮದ್ ಅಜೇಯರಾಗಿ ಉಳಿದರು.
ರಾಜಸ್ಥಾನ್ ರಾಯಲ್ಸ್ ಪರ ಕುಲ್ದೀಪ್ ಸೇನ್ 3 ವಿಕೆಟ್, ಯುಜ್ವೇಂದ್ರ ಚಹಲ್ 2 ವಿಕೆಟ್ ಹಾಗೂ ಅವೇಶ್ ಖಾನ್ ಒಂದು ವಿಕೆಟ್ ಪಡೆದರು.
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…