ಕ್ರೀಡೆ

ಐಪಿಎಲ್‌ 2024: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಫೀಲ್ಡಿಂಗ್ ಆಯ್ದುಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅಬ್ಬರದ ಬ್ಯಾಟಿಂಗ್‌ನಿಂದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ 197 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟನ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 199 ರನ್‌ ಕಲೆಹಾಕಿದೆ.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ ಕಣಕ್ಕಿಳಿದರು. ಜೈಸ್ವಾಲ್‌ 24 (19) ರನ್‌ ಗಳಿಸಿದರೆ, ಬಟ್ಲರ್‌ 8 (10) ರನ್‌ ಗಳಿಸಿ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಜತೆಯಾದ ಸಂಜು ಸಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ 130 ರನ್‌ಗಳ ಅಬ್ಬರದ ಜತೆಯಾಟವಾಡಿದರು. ರಿಯಾನ್‌ ಪರಾಗ್‌ 76 (48) ರನ್‌ ಬಾರಿಸಿ ಔಟ್‌ ಆದರೆ, ನಾಯಕ ಸಂಜು ಸಾಮ್ಸನ್‌ ಅಜೇಯ 68 (38) ರನ್‌ ಬಾರಿಸಿದರು ಮತ್ತು ಶಿಮ್ರಾನ್‌ ಹೆಟ್ಮೈರ್‌ ಅಜೇಯ 13 (5) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಮೋಹಿತ್‌ ಶರ್ಮಾ, ರಶೀದ್‌ ಖಾನ್‌ ಹಾಗೂ ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಸಾಯಿ ಸುದರ್ಶನ್‌ ಹಾಗೂ ನಾಯಕ ಶುಭ್‌ಮನ್‌ ಗಿಲ್‌ ಆರಂಭಿಕರಾಗಿ ಕಣಕ್ಕಿಳಿದರು. ಸಾಯಿ ಸುದರ್ಶನ್‌ 35 (29) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಜವಾಬ್ದಾರಿಯುತ ಆಟವನ್ನಾಡಿದ ಶುಭ್‌ಮನ್‌ ಗಿಲ್‌ 72 (44) ರನ್‌ ಬಾರಿಸಿದರು. ಇನ್ನುಳಿದಂತೆ ಮ್ಯಾಥ್ಯೂ ವೇಡ್‌ 4 (6) ರನ್‌, ಅಭಿನವ್‌ ಮನೋಹರ್‌ 1 (2) ರನ್‌, ವಿಜಯ್‌ ಶಂಕರ್‌ 16 (10) ರನ್‌, ಶಾರುಖ್‌ ಖಾನ್‌ 14 (8) ರನ್‌ ಗಳಿಸಿದರು. ಅಂತಿಮ ಹಂತದಲ್ಲಿ ಉತ್ತಮ ಆಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದ ರಾಹುಲ್‌ ತೆವಾಟಿಯಾ 22 (11) ರನ್‌ ಹಾಗೂ ರಶೀದ್‌ ಖಾನ್‌ ಅಜೇಯ 24 (11) ರನ್‌ ಗಳಿಸಿದರು. ಯಾವುದೇ ಎಸೆತ ಎದುರಿಸಿದ ನೂರ್‌ ಅಹ್ಮದ್‌ ಅಜೇಯರಾಗಿ ಉಳಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ಕುಲ್‌ದೀಪ್ ಸೇನ್‌ 3 ವಿಕೆಟ್‌, ಯುಜ್ವೇಂದ್ರ ಚಹಲ್‌ 2 ವಿಕೆಟ್‌ ಹಾಗೂ ಅವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago