ಕ್ರೀಡೆ

ಗುಲ್ಬರ್ಗ ಮಿಸ್ಟಿಕ್ಸ್‌ಗೆ ಮಹಾರಾಜ ಟ್ರೋಫಿ

ಬೆಂಗಳೂರು: ಫೈನಲ್ ಪಂದ್ಯದಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ೧೧ ರನ್ ಅಂತರದಲ್ಲಿ ಜಯ ಗಳಿಸಿದ ಗುಲ್ಬರ್ಗ ಮಿಸ್ಟಿಕ್ಸ್ ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ-೨೦ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವಿಜೇತ ಗುಲ್ಬರ್ಗ ತಂಡ ೨೫ ಲಕ್ಷ ರೂ, ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.

೨೨೧ ರನ್‌ಗಳ ಬೃಹತ್ ಮೊತ್ತವನ್ನು ಬೆಂಬತ್ತಿದ ಬೆಂಗಳೂರು ಬ್ಲಾಸ್ಟರ್ಸ್ ತಂಡ ಚೇತನ್ ಎಲ್.ಆರ್. (೯೧) ಹಾಗೂ ಕ್ರಾಂತಿ ಕುಮಾರ್ (೪೭) ಅವರ ೧೧೬ ರನ್ ಜೊತೆಯಾಟದಿಂದ ಗೆಲ್ಲು ಆತ್ಮವಿಶ್ವಾಸ ಹೊಂದಿತ್ತು, ಆದರೆ ಮನೋಜ್ ಭಾಂಡಗೆ ಬೆಂಗಳೂರಿನ ಕನಸನ್ನು ನುಚ್ಚುನೂರು ಮಾಡಿದರು. ಅಂತಿಮವಾಗಿ ಬೆಂಗಳೂರು ೯ ವಿಕೆಟ್ ನಷ್ಟಕ್ಕೆ ೨೦೯ ರನ್ ಗಳಿಸಿ ಸೋಲೊಪ್ಪಿಕೊಂಡಿತು. ಮನೋಜ ಭಾಂಡಗೆ ೩೨ ರನ್‌ಗೆ ೩ ವಿಕೆಟ್ ಗಳಿಸಿ ಪಂದ್ಯಕ್ಕೆ ತಿರುವು ನೀಡಿದರು.

ಬೆಂಗಳೂರು ಬ್ಲಾಸ್ಟರ್ಸ್‌ಗೆ ೨೨೧ ರನ್ ಗುರಿ: ದೇವದತ್ತ ಪಡಿಕ್ಕಲ್ (೫೬*) ಹಾಗೂ ನಾಯಕ ಮನೀಶ್ ಪಾಂಡೆ (೪೧*) ಅವರ ಸ್ಛೋಟಕ ಬ್ಯಾಟಿಂಗ್ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಎದುರಾಳಿ ಬೆಂಗಳೂರು ಬ್ಲಾಸ್ಟರ್ಸ್‌ಗೆ ೨೨೧ ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಬ್ಲಾಸ್ಟರ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿತು. ಆಡಿದ ಪ್ರತಿೊಂಬ್ಬ ಬ್ಯಾಟ್ಸ್‌ಮನ್ ತನ್ನಿಂದಾದ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವುದು ಗುಲ್ಬರ್ಗದ ಹೆಮ್ಮೆಯ ಸಂಗತಿ. ರೋಹನ್ ಪಾಟೀಲ್ (೩೮) ಹಾಗೂ ಜೆಸ್ವತ್ ಆಚಾರ್ಯ (೩೯) ೬೦ ರನ್‌ಗಳ ಜೊತೆಯಾಟವಾಡಿ ಬೃಹತ್ ಮೊತ್ತಕ್ಕೆ ವೇದಿಕೆ ಹಾಕಿಕೊಟ್ಟರು. ಟೂರ್ನಿಯಲ್ಲಿ ಇದುವರೆಗೂ ಎರಡು ಶತಕ ದಾಖಲಿಸಿರುವ ರೋಹನ್ ಪಾಟೀಲ್ ಅಬ್ಬರದ ಆರಂಭ ನೀಡಿದರು. ೨೧ ಎಸೆತಗಳಲ್ಲಿ ೬ ಬೌಂಡರಿ ಹಾಗೂ ೧ ಸಿಕ್ಸರ್ ಸಿಡಿಸಿ ಅಮೂಲ್ಯ ೩೮ ರನ್ ಗಳಿಸಿ ನಿರ್ಗಮಿಸಿದರು. ಜೆಸ್ವತ್ ಆಚಾರ್ಯ ೩ ಬೌಂಡರಿ ಹಾಗೂ ೩ ಸಿಕ್ಸರ್ ನೆರವಿನಿಂದ ೩೯ ರನ್ ಸಿಡಿಸಿ ಬೃಹತ್ ಮೊತ್ತಕ್ಕೆ ಮುನ್ನುಡಿ ಬರೆದರು.

ಎರಡನೇ ಕ್ವಾಲಿಫಯರ್‌ನಲ್ಲಿ ೯೬ ರನ್ ಸಿಡಿಸಿ ಜಯದ ರೂವಾರಿ ಎನಿಸಿದ್ದ ದೇವದತ್ತ ಪಡಿಕ್ಕಲ್ ಆರಂಭದಲ್ಲಿ ನಿದಾಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದರೂ ನಂತರದ ಅಬ್ಬರದ ಹೊಡೆಗಳಿಗೆ ಮನ ಮಾಡಿ ೪೨ ಎಸೆತಗಳಲ್ಲಿ ೫ ಬೌಂಡರಿ ಹಾಗೂ ೧ ಸಿಕ್ಸರ್ ನೆರವಿನಿಂದ ಅಜೇಯ ೫೬ ರನ್ ಗಳಿಸಿ ಬೃಹತ್ ಮೊತ್ತಕ್ಕೆ ನೆರವಾದರು. ನಾಯಕ ಮನೀಶ್ ಪಾಂಡೆ ಕೇವಲ ೧೭ ಎಸೆತಗಳಲ್ಲಿ ೨ ಬೌಂಡರಿ ಹಾಗೂ ೪ ಸಿಕ್ಸರ್ ನೆರವಿನಿಂದ ಅಜೇಯ ೪೧ ರನ್ ಸಿಡಿಸಿ ನಾಯಕನ ಜವಾಬ್ದಾರಿಯ ಆಟವಾಡಿದರು. ಪಡಿಕ್ಕಲ್ ಹಾಗೂ ಪಾಂಡೆ ೬೨ ರನ್ ಜೊತೆಯಾಟವಾಡಿ ಅಸಾಧಾರಣ ಮೊತ್ತವನ್ನು ದಾಖಲಿಸಿದರು. ಇದಕ್ಕೂ ಮುನ್ನ ಯುವ ಆಟಗಾರ ಕೃಷ್ಣನ್ ಶ್ರೀಜಿತ್ ೨೫ ಎಸತೆಗಳಲ್ಲಿ ೩೮ ರನ್ ಗಳಿಸಿ ತಂಡದ ಪರ ಜವಾಬ್ದಾರಿಯುತ ಆಟವಾಡಿದರು.

ಬೆಂಗಳೂರು ಬ್ಲಾಸ್ಟರ್ಸ್ ಪರ ಅನಿರುಧ್ ಜೋಶಿ ೩ ಓವರ್‌ಗಲ್ಲಿ ಕೇವಲ ೧೫ ರನ್ ನೀಡಿ ೧ ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿದರು.

ಸಂಕ್ಷಿಪ್ತ ಸ್ಕೋರ್:
ಗುಲ್ಬರ್ಗ ಮಿಸ್ಟಿಕ್ಸ್: ೨೦ ಓವರ್‌ಗಳಲ್ಲಿ ೩ ವಿಕೆಟ್‌ಗೆ ೨೨೦ ( ರೋಹನ್ ಪಾಟೀಲ್ ೩೮, ಜೆಸ್ವತ್ ಆಚಾರ್ಯ ೩೯, ಕೃಷ್ಣನ್ ಶ್ರೀಜಿತ್ ೩೮, ದೇವದತ್ತ ಪಡಿಕ್ಕಲ್ ೫೬*, ಮನೀಶ್ ಪಾಂಡೆ ೪೧* ಪ್ರದೀಪ್ ೫೧ಕ್ಕೆ ೧, ರಿಶಿ ಬೋಪಣ್ಣ ೩೫ಕ್ಕೆ ೧, ಅನಿರುಧ್ ಜೋಶಿ ೧೫ಕ್ಕೆ ೧)
ಬೆಂಗಳೂರು ಬ್ಲಾಸ್ಟರ್ಸ್: ೨೦ ಓವರ್‌ಗಳಲ್ಲಿ ೯ ವಿಕೆಟ್‌ಗೆ ೨೦೯ (ಎಲ್.ಆರ್. ಚೇತನ್ ೯೧, ಕ್ರಾಂತಿ ಕುಮಾರ್ ೪೭, ರಿತೇಶ್ ಭಟ್ಕಳ್ ೨೦ಕ್ಕೆ ೨, ಪ್ರಣವ್ ಭಾಟಿಯಾ ೩೯ಕ್ಕೆ ೨, ಮನೋಜ್ ಭಾಂಡಗೆ ೩೨ಕ್ಕೆ ೩)

andolana

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

15 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

26 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

40 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

44 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago