ಕ್ರೀಡೆ

ಇನ್‌ಸ್ಟಾಗ್ರಾಮ್‌ನ ಪೋಸ್ಟ್‌ ಒಂದಕ್ಕೆ 11 ಕೋಟಿ ರೂ. ಗಳಿಕೆ.?’: ಸ್ಪಷ್ಟನೆ ನೀಡಿದ ಕೊಹ್ಲಿ.!

ನವದೆಹಲಿ : ಭಾರತ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಂದೇ ಒಂದು ಪ್ರಮೋಷನ್‌ ಪೋಸ್ಟ್‌ಗೆ 11. 45 ಕೋಟಿ ರೂ. ಸಂಭಾವನೆ ಪಡೆಯುತ್ತಾರೆಂಬ ಸುದ್ದಿ ಕಳೆದ ಎರಡು ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದನ್ನು ಗಮನಿಸಿದ ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಶಿಯಲ್‌ ಮೀಡಿಯಾ ಮಾರ್ಕೆಟಿಂಗ್‌ ಸಲೋಷನ್ಸ್‌ ಫ್ಲಾಟ್‌ಪಾರ್ಮ್‌ ಹಾಪರ್‌ ಎಚ್‌ಕ್ಯೂ ಶುಕ್ರವಾರ ವಿರಾಟ್‌ ಕೊಹ್ಲಿ ಸೋಶಿಯಲ್‌ ಮೀಡಿಯಾ ಆದಾಯದ ಬಗ್ಗೆ ವರದಿಯನ್ನು ಮಾಡಿತ್ತು. ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಲಿಯೊನೆಲ್‌ ಮೆಸ್ಸಿ ಬಳಿಕ ವಿಶ್ವದಲ್ಲಿಯೇ ಸೋಶಿಯಲ್‌ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮೂರನೇ ಕ್ರೀಡಾಪಟು ವಿರಾಟ್‌ ಕೊಹ್ಲಿ ಎಂದು ತಿಳಿಸಿತ್ತು. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಇದೀಗ ಸ್ವತಃ ವಿರಾಟ್‌ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ತಾನು ಒಂದು ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗೆ 11.45 ಕೋಟಿ ರೂ ಪಡೆಯುತ್ತೇನೆಂಬುದು ಸುಳ್ಳು ಎಂದು ಹೇಳಿದ್ದಾರೆ. “ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸೋಶಿಯಲ್‌ ಮೀಡಿಯಾ ಗಳೆಕೆಯ ಬಗ್ಗೆ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ,” ಎಂದು ವಿರಾಟ್‌ ಕೊಹ್ಲಿ ಶನಿವಾರ ಟ್ವೀಟ್‌ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಕೊಹ್ಲಿ ಸಕ್ರಿಯ

ವಿರಾಟ್‌ ಕೊಹ್ಲಿ ಕ್ರಿಕೆಟ್‌ ಚಟುವಟಿಕೆಗಳ ಜೊತೆಗೆ ಸೋಶಿಯಲ್‌ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಪ್ರತಿ ನಿತ್ಯ ಒಂದಲ್ಲ ಒಂದು ಪೋಸ್ಟ್ ಅನ್ನು ಮಾಡುತ್ತಿರುತ್ತಾರೆ. ವರ್ಕ್‌ಔಟ್‌ ವಿಡಿಯೋ, ಬ್ಯಾಟಿಂಗ್‌ ವಿಡಿಯೋ, ತಮ್ಮ ಪತ್ನಿ ಜೊತೆ ತರಬೇತಿ ಅವಧಿಯ ವಿಡಿಯೋಗಳನ್ನು ಹಾಕುತ್ತಾರೆ. ಇದರ ಜೊತೆಗೆ ಅವರು ಕೆಲ ಉತ್ಪನ್ನಗಳ ಪ್ರಮೋಷನ್‌ ಪೋಸ್ಟ್‌ಗಳನ್ನು ಕೂಡ ಹಾಕುತ್ತಾರೆ.

ವಿರಾಟ್‌ ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗೆ 5 ರಿಂದ 8 ಕೋಟಿ ರೂ. ಪಡೆಯುತ್ತಿದ್ದಾರೆಂದು ಈ ಹಿಂದೆ ಹಲವು ಬಾರಿ ವರದಿಗಳಾಗಿವೆ. ಇದಕ್ಕೆ ವಿರಾಟ್‌ ಎಂದಿಗೂ ಸ್ಪಷ್ಟನೆ ನೀಡಿರಲಿಲ್ಲ. ಆದರೆ, ಶುಕ್ರವಾರ ಕೊಹ್ಲಿ 11.45 ಕೋಟಿ ಪಡೆಯುತ್ತಿದ್ದಾರೆಂಬ ವರದಿ ಓದಿದ ಸೆಲೆಬ್ರಿಟಗಳು ಸೇರಿದಂತೆ ಸಾಮಾನ್ಯ ಜನರಿಗೂ ಅಚ್ಚರಿಯಾಗಿತ್ತು. ಆದರೆ, ವಿರಾಟ್‌ ಕೊಹ್ಲಿಯೇ ಇದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

4 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

5 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

6 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago