ಕ್ರೀಡೆ

ಇನ್‌ಸ್ಟಾಗ್ರಾಮ್‌ನ ಪೋಸ್ಟ್‌ ಒಂದಕ್ಕೆ 11 ಕೋಟಿ ರೂ. ಗಳಿಕೆ.?’: ಸ್ಪಷ್ಟನೆ ನೀಡಿದ ಕೊಹ್ಲಿ.!

ನವದೆಹಲಿ : ಭಾರತ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಂದೇ ಒಂದು ಪ್ರಮೋಷನ್‌ ಪೋಸ್ಟ್‌ಗೆ 11. 45 ಕೋಟಿ ರೂ. ಸಂಭಾವನೆ ಪಡೆಯುತ್ತಾರೆಂಬ ಸುದ್ದಿ ಕಳೆದ ಎರಡು ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದನ್ನು ಗಮನಿಸಿದ ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಶಿಯಲ್‌ ಮೀಡಿಯಾ ಮಾರ್ಕೆಟಿಂಗ್‌ ಸಲೋಷನ್ಸ್‌ ಫ್ಲಾಟ್‌ಪಾರ್ಮ್‌ ಹಾಪರ್‌ ಎಚ್‌ಕ್ಯೂ ಶುಕ್ರವಾರ ವಿರಾಟ್‌ ಕೊಹ್ಲಿ ಸೋಶಿಯಲ್‌ ಮೀಡಿಯಾ ಆದಾಯದ ಬಗ್ಗೆ ವರದಿಯನ್ನು ಮಾಡಿತ್ತು. ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಲಿಯೊನೆಲ್‌ ಮೆಸ್ಸಿ ಬಳಿಕ ವಿಶ್ವದಲ್ಲಿಯೇ ಸೋಶಿಯಲ್‌ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮೂರನೇ ಕ್ರೀಡಾಪಟು ವಿರಾಟ್‌ ಕೊಹ್ಲಿ ಎಂದು ತಿಳಿಸಿತ್ತು. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಇದೀಗ ಸ್ವತಃ ವಿರಾಟ್‌ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ತಾನು ಒಂದು ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗೆ 11.45 ಕೋಟಿ ರೂ ಪಡೆಯುತ್ತೇನೆಂಬುದು ಸುಳ್ಳು ಎಂದು ಹೇಳಿದ್ದಾರೆ. “ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸೋಶಿಯಲ್‌ ಮೀಡಿಯಾ ಗಳೆಕೆಯ ಬಗ್ಗೆ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ,” ಎಂದು ವಿರಾಟ್‌ ಕೊಹ್ಲಿ ಶನಿವಾರ ಟ್ವೀಟ್‌ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಕೊಹ್ಲಿ ಸಕ್ರಿಯ

ವಿರಾಟ್‌ ಕೊಹ್ಲಿ ಕ್ರಿಕೆಟ್‌ ಚಟುವಟಿಕೆಗಳ ಜೊತೆಗೆ ಸೋಶಿಯಲ್‌ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಪ್ರತಿ ನಿತ್ಯ ಒಂದಲ್ಲ ಒಂದು ಪೋಸ್ಟ್ ಅನ್ನು ಮಾಡುತ್ತಿರುತ್ತಾರೆ. ವರ್ಕ್‌ಔಟ್‌ ವಿಡಿಯೋ, ಬ್ಯಾಟಿಂಗ್‌ ವಿಡಿಯೋ, ತಮ್ಮ ಪತ್ನಿ ಜೊತೆ ತರಬೇತಿ ಅವಧಿಯ ವಿಡಿಯೋಗಳನ್ನು ಹಾಕುತ್ತಾರೆ. ಇದರ ಜೊತೆಗೆ ಅವರು ಕೆಲ ಉತ್ಪನ್ನಗಳ ಪ್ರಮೋಷನ್‌ ಪೋಸ್ಟ್‌ಗಳನ್ನು ಕೂಡ ಹಾಕುತ್ತಾರೆ.

ವಿರಾಟ್‌ ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗೆ 5 ರಿಂದ 8 ಕೋಟಿ ರೂ. ಪಡೆಯುತ್ತಿದ್ದಾರೆಂದು ಈ ಹಿಂದೆ ಹಲವು ಬಾರಿ ವರದಿಗಳಾಗಿವೆ. ಇದಕ್ಕೆ ವಿರಾಟ್‌ ಎಂದಿಗೂ ಸ್ಪಷ್ಟನೆ ನೀಡಿರಲಿಲ್ಲ. ಆದರೆ, ಶುಕ್ರವಾರ ಕೊಹ್ಲಿ 11.45 ಕೋಟಿ ಪಡೆಯುತ್ತಿದ್ದಾರೆಂಬ ವರದಿ ಓದಿದ ಸೆಲೆಬ್ರಿಟಗಳು ಸೇರಿದಂತೆ ಸಾಮಾನ್ಯ ಜನರಿಗೂ ಅಚ್ಚರಿಯಾಗಿತ್ತು. ಆದರೆ, ವಿರಾಟ್‌ ಕೊಹ್ಲಿಯೇ ಇದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago