ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದೇ ಒಂದು ಪ್ರಮೋಷನ್ ಪೋಸ್ಟ್ಗೆ 11. 45 ಕೋಟಿ ರೂ. ಸಂಭಾವನೆ ಪಡೆಯುತ್ತಾರೆಂಬ ಸುದ್ದಿ ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದನ್ನು ಗಮನಿಸಿದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.
ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಸಲೋಷನ್ಸ್ ಫ್ಲಾಟ್ಪಾರ್ಮ್ ಹಾಪರ್ ಎಚ್ಕ್ಯೂ ಶುಕ್ರವಾರ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾ ಆದಾಯದ ಬಗ್ಗೆ ವರದಿಯನ್ನು ಮಾಡಿತ್ತು. ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಲಿಯೊನೆಲ್ ಮೆಸ್ಸಿ ಬಳಿಕ ವಿಶ್ವದಲ್ಲಿಯೇ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮೂರನೇ ಕ್ರೀಡಾಪಟು ವಿರಾಟ್ ಕೊಹ್ಲಿ ಎಂದು ತಿಳಿಸಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಇದೀಗ ಸ್ವತಃ ವಿರಾಟ್ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ತಾನು ಒಂದು ಇನ್ಸ್ಟಾಗ್ರಾಮ್ ಪೋಸ್ಟ್ಗೆ 11.45 ಕೋಟಿ ರೂ ಪಡೆಯುತ್ತೇನೆಂಬುದು ಸುಳ್ಳು ಎಂದು ಹೇಳಿದ್ದಾರೆ. “ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸೋಶಿಯಲ್ ಮೀಡಿಯಾ ಗಳೆಕೆಯ ಬಗ್ಗೆ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ,” ಎಂದು ವಿರಾಟ್ ಕೊಹ್ಲಿ ಶನಿವಾರ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ವಿರಾಟ್ ಕೊಹ್ಲಿ ಕ್ರಿಕೆಟ್ ಚಟುವಟಿಕೆಗಳ ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಪ್ರತಿ ನಿತ್ಯ ಒಂದಲ್ಲ ಒಂದು ಪೋಸ್ಟ್ ಅನ್ನು ಮಾಡುತ್ತಿರುತ್ತಾರೆ. ವರ್ಕ್ಔಟ್ ವಿಡಿಯೋ, ಬ್ಯಾಟಿಂಗ್ ವಿಡಿಯೋ, ತಮ್ಮ ಪತ್ನಿ ಜೊತೆ ತರಬೇತಿ ಅವಧಿಯ ವಿಡಿಯೋಗಳನ್ನು ಹಾಕುತ್ತಾರೆ. ಇದರ ಜೊತೆಗೆ ಅವರು ಕೆಲ ಉತ್ಪನ್ನಗಳ ಪ್ರಮೋಷನ್ ಪೋಸ್ಟ್ಗಳನ್ನು ಕೂಡ ಹಾಕುತ್ತಾರೆ.
ವಿರಾಟ್ ಕೊಹ್ಲಿ ಒಂದು ಇನ್ಸ್ಟಾಗ್ರಾಮ್ ಪೋಸ್ಟ್ಗೆ 5 ರಿಂದ 8 ಕೋಟಿ ರೂ. ಪಡೆಯುತ್ತಿದ್ದಾರೆಂದು ಈ ಹಿಂದೆ ಹಲವು ಬಾರಿ ವರದಿಗಳಾಗಿವೆ. ಇದಕ್ಕೆ ವಿರಾಟ್ ಎಂದಿಗೂ ಸ್ಪಷ್ಟನೆ ನೀಡಿರಲಿಲ್ಲ. ಆದರೆ, ಶುಕ್ರವಾರ ಕೊಹ್ಲಿ 11.45 ಕೋಟಿ ಪಡೆಯುತ್ತಿದ್ದಾರೆಂಬ ವರದಿ ಓದಿದ ಸೆಲೆಬ್ರಿಟಗಳು ಸೇರಿದಂತೆ ಸಾಮಾನ್ಯ ಜನರಿಗೂ ಅಚ್ಚರಿಯಾಗಿತ್ತು. ಆದರೆ, ವಿರಾಟ್ ಕೊಹ್ಲಿಯೇ ಇದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…