ಕ್ರೀಡೆ

ಮೊದಲ ಟಿ೨೦: ಆಸೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಿಶಾಖಪಟ್ಟಣಂ : ಭಾರತ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಮುಂದೆ ಮಂಕಾದ ಆಸೀಸ್‌ ತಂಡವು ಮೊದಲ ಟಿ೨೦ ಪಂದ್ಯದಲ್ಲಿ ಸೋಲನುಭವಿಸಿದೆ.

ಇಲ್ಲಿನ ವೈ ಎಸ್‌ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ೨೦ ಪಂದ್ಯದಲ್ಲಿ ಭಾರತ ತಂಡ ೨ ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಆಸ್ಟ್ರೇಲಿಯಾ ತಂಡ ನೀಡಿದ ೨೦೮ ರನ್‌ ಗುರಿ ಬೆನ್ನಟ್ಟಿದ ಭಾರತ ತಂಡ ೨ ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ ೩೧ ರನ್‌ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್‌ನಲ್ಲಿಯೇ ಮ್ಯಾಥ್ಯೂ ಶಾರ್ಟ್‌ (೧೩) ಕ್ಲೀನ್‌ ಬೋಲ್ಡ್‌ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್‌ ಸ್ಮಿತ್‌ ಹಾಗೂ ಜೋಶ್‌ ಇಂಗ್ಲಿಸ್‌ ಮುರಿಯದ ೧೩೦ ರನ್‌ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್‌ ಇಂಗ್ಲಿಸ್‌ ತಾವೆದುರಿಸಿದ ೫೦ ಎಸೆತಗಳಲ್ಲಿ ೧೧ ಬೌಂಡರಿ ಹಾಗೂ ೮ ಸಿಕ್ಸರ್‌ ಸಹಿತ ೧೧೦ ರನ್‌ ಕಲೆ ಹಾಕಿದರು. ಇತ್ತ ಸ್ಟೀವ್‌ ಸ್ಮಿತ್‌ ೪೧ ಎಸೆತಗಳಲ್ಲಿ ೮ ಬೌಂಡರಿ ಸಹಿತ ೫೨ ರನ್‌ ಕಲೆಹಾಕಿ ತಂಡ ೨೦೦ ಗಡಿ ದಾಟಲು ಸಹಕರಿಸಿದರು.

ನಂತರ ಬಂದ ಸ್ಟೋಯ್ನಿಸ್‌ (೭), ಟಿಮ್‌ ಡೇವಿಡ್‌(೧೯) ರನ್‌ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ೨೦ ಓವರ್‌ಗಳಲ್ಲಿ ೩ ವಿಕೆಟ್‌ ಕಳೆದುಕೊಂಡು ೨೦೮ರನ್‌ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್‌ ನೀಡಿದರು.

ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ತಲಾ ೧ ವಿಕೆಟ್‌ ಪಡೆದರು.

ಆಸ್ಟ್ರೇಲಿಯಾ ತಂಡ ನೀಡಿದ ೨೦೮ ರನ್‌ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಖಾತೆ ತೆರೆಯದೇ ಆರಂಭಿಕ ಆಟಗಾರ ಋತುರಾಜ್‌ (೦) ಕ್ಕೆ ಔಟಾದರು. ಯಶಸ್ವಿ ಜೈಸ್ವಾಲ್‌ (೨೧) ರನ್‌ಗಳಿಸಿ ನಿರ್ಗಮಿಸಿದರು.

ಇಶಾನ್‌ ಕಿಸಾನ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರ ಜೋಡಿ ಮುರಿಯದ ೧೧೦ ರನ್‌ಗಳ ಜೊತೆಯಾಟ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು. ಇಶಾನ್‌ ೩೯ ಎಸೆತಗಳಲ್ಲಿ ೨ ಬೌಂಡರಿ ಹಾಗೂ ೫ ಸಿಕ್ಸರ್‌ ಸಹಿತ ೫೮ ರನ್‌ ಬಾರಿಸಿದರೆ, ನಾಯಕ ಸೂರ್ಯಕುಮಾರ್‌ ಯಾದವ್‌ ಕೇವಲ ೪೨ ಎಸೆತಗಳಲ್ಲಿ ೯ ಬೌಂಡಿರಿ ಹಾಗೂ ೪ ಸಿಕ್ಸರ್‌ ಮೂಲಕ ೮೦ ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು.

ಕೊನೆಯಲ್ಲಿ ಮ್ಯಾಚೆಎ ವಿನ್ನಿಂಗ್‌ ಆಟವಾಡಿದ ರಿಂಕು ಸಿಂಗ್‌ ೨೨ ರನ್‌ ಬಾರಿ ತಂಡಕ್ಕೆ ಜಯ ತಂದು ಕೊಟ್ಟರು.

ಆಸ್ಟ್ರೇಲಿಯಾ ಪರ ತನ್ವೀರ್‌ ಸಂಘ ೨, ಮ್ಯಾಥ್ಯೂ ಶಾರ್ಟ್‌, ಜಾಸನ್‌ ಬೆಹ್ರೆನ್‌ಡ್ರಾಫ್‌ ತಲಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ : ಸೂರ್ಯಕುಮಾರ್‌ ಯಾದವ್‌.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago