ಕ್ರೀಡೆ

ಮೊದಲ ಟಿ೨೦: ಆಸೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಿಶಾಖಪಟ್ಟಣಂ : ಭಾರತ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಮುಂದೆ ಮಂಕಾದ ಆಸೀಸ್‌ ತಂಡವು ಮೊದಲ ಟಿ೨೦ ಪಂದ್ಯದಲ್ಲಿ ಸೋಲನುಭವಿಸಿದೆ.

ಇಲ್ಲಿನ ವೈ ಎಸ್‌ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ೨೦ ಪಂದ್ಯದಲ್ಲಿ ಭಾರತ ತಂಡ ೨ ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಆಸ್ಟ್ರೇಲಿಯಾ ತಂಡ ನೀಡಿದ ೨೦೮ ರನ್‌ ಗುರಿ ಬೆನ್ನಟ್ಟಿದ ಭಾರತ ತಂಡ ೨ ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ ೩೧ ರನ್‌ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್‌ನಲ್ಲಿಯೇ ಮ್ಯಾಥ್ಯೂ ಶಾರ್ಟ್‌ (೧೩) ಕ್ಲೀನ್‌ ಬೋಲ್ಡ್‌ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್‌ ಸ್ಮಿತ್‌ ಹಾಗೂ ಜೋಶ್‌ ಇಂಗ್ಲಿಸ್‌ ಮುರಿಯದ ೧೩೦ ರನ್‌ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್‌ ಇಂಗ್ಲಿಸ್‌ ತಾವೆದುರಿಸಿದ ೫೦ ಎಸೆತಗಳಲ್ಲಿ ೧೧ ಬೌಂಡರಿ ಹಾಗೂ ೮ ಸಿಕ್ಸರ್‌ ಸಹಿತ ೧೧೦ ರನ್‌ ಕಲೆ ಹಾಕಿದರು. ಇತ್ತ ಸ್ಟೀವ್‌ ಸ್ಮಿತ್‌ ೪೧ ಎಸೆತಗಳಲ್ಲಿ ೮ ಬೌಂಡರಿ ಸಹಿತ ೫೨ ರನ್‌ ಕಲೆಹಾಕಿ ತಂಡ ೨೦೦ ಗಡಿ ದಾಟಲು ಸಹಕರಿಸಿದರು.

ನಂತರ ಬಂದ ಸ್ಟೋಯ್ನಿಸ್‌ (೭), ಟಿಮ್‌ ಡೇವಿಡ್‌(೧೯) ರನ್‌ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ೨೦ ಓವರ್‌ಗಳಲ್ಲಿ ೩ ವಿಕೆಟ್‌ ಕಳೆದುಕೊಂಡು ೨೦೮ರನ್‌ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್‌ ನೀಡಿದರು.

ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ತಲಾ ೧ ವಿಕೆಟ್‌ ಪಡೆದರು.

ಆಸ್ಟ್ರೇಲಿಯಾ ತಂಡ ನೀಡಿದ ೨೦೮ ರನ್‌ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಖಾತೆ ತೆರೆಯದೇ ಆರಂಭಿಕ ಆಟಗಾರ ಋತುರಾಜ್‌ (೦) ಕ್ಕೆ ಔಟಾದರು. ಯಶಸ್ವಿ ಜೈಸ್ವಾಲ್‌ (೨೧) ರನ್‌ಗಳಿಸಿ ನಿರ್ಗಮಿಸಿದರು.

ಇಶಾನ್‌ ಕಿಸಾನ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರ ಜೋಡಿ ಮುರಿಯದ ೧೧೦ ರನ್‌ಗಳ ಜೊತೆಯಾಟ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು. ಇಶಾನ್‌ ೩೯ ಎಸೆತಗಳಲ್ಲಿ ೨ ಬೌಂಡರಿ ಹಾಗೂ ೫ ಸಿಕ್ಸರ್‌ ಸಹಿತ ೫೮ ರನ್‌ ಬಾರಿಸಿದರೆ, ನಾಯಕ ಸೂರ್ಯಕುಮಾರ್‌ ಯಾದವ್‌ ಕೇವಲ ೪೨ ಎಸೆತಗಳಲ್ಲಿ ೯ ಬೌಂಡಿರಿ ಹಾಗೂ ೪ ಸಿಕ್ಸರ್‌ ಮೂಲಕ ೮೦ ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು.

ಕೊನೆಯಲ್ಲಿ ಮ್ಯಾಚೆಎ ವಿನ್ನಿಂಗ್‌ ಆಟವಾಡಿದ ರಿಂಕು ಸಿಂಗ್‌ ೨೨ ರನ್‌ ಬಾರಿ ತಂಡಕ್ಕೆ ಜಯ ತಂದು ಕೊಟ್ಟರು.

ಆಸ್ಟ್ರೇಲಿಯಾ ಪರ ತನ್ವೀರ್‌ ಸಂಘ ೨, ಮ್ಯಾಥ್ಯೂ ಶಾರ್ಟ್‌, ಜಾಸನ್‌ ಬೆಹ್ರೆನ್‌ಡ್ರಾಫ್‌ ತಲಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ : ಸೂರ್ಯಕುಮಾರ್‌ ಯಾದವ್‌.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago