ಕ್ರೀಡೆ

ಡಿಸೆಂಬರ್ 19ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!

ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಕ್ರಿಕೆಟ್ ವೆಬ್‌ಸೈಟ್ ಕ್ರಿಕ್ ಇನ್ಫೋ ಪ್ರಕಾರ, 10 ಐಪಿಎಲ್ ತಂಡಗಳಿಗೆ ನವೆಂಬರ್ 15ರವರೆಗೆ ಸಮಯವಿದೆ. ಇದರಲ್ಲಿ ಅವರು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತಕ್ಕೆ ಸಲ್ಲಿಸಬಹುದು. ಇದಾದ ನಂತರ ಡಿಸೆಂಬರ್ ಮೊದಲ ವಾರದೊಳಗೆ ಹರಾಜು ಪಟ್ಟಿ ಸಿದ್ಧಗೊಳ್ಳಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆಟಗಾರರನ್ನು ಖರೀದಿಸಲು ತಂಡಗಳು 5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬಿಡ್ ಮಾಡಬಹುದು. ಮಾಧ್ಯಮ ವರದಿಗಳ ಪ್ರಕಾರ, ಕಳೆದ ಋತುವಿನಲ್ಲಿ ಫ್ರಾಂಚೈಸಿಗೆ 95 ಕೋಟಿ ರೂಪಾಯಿ ನೀಡಲಾಗಿತ್ತು ಈ ಬಾರಿ 100 ಕೋಟಿಗೆ ಏರಿಸಲಾಗಿದೆ. ಅದಲ್ಲದೆ, ತಂಡಗಳು ಹಿಂದಿನ ಋತುವಿನ ಅಂದರೆ 2023ರ ಉಳಿದ ಮೊತ್ತವನ್ನು ಸಹ ಇಲ್ಲಿ ಬಿಡ್ ಮಾಡಬಹುದು.

ಪಂಜಾಬ್ ಕಿಂಗ್ಸ್ ಹೆಚ್ಚು ಹಣ ಹೊಂದಿದೆ
2024ರ ಐಪಿಎಲ್ ಋತುವಿಗೆ ತಂಡವನ್ನು ಸಿದ್ಧಪಡಿಸಲು ಪಂಜಾಬ್ ಕಿಂಗ್ಸ್ ಅತ್ಯಧಿಕ ಮೊತ್ತವನ್ನು ಹೊಂದಿದೆ. ಪಂಜಾಬ್ ಕಿಂಗ್ಸ್ ಗೆ ಕಳೆದ ಋತುವಿನಲ್ಲಿ 12.20 ಕೋಟಿ ರೂಪಾಯಿ ಉಳಿದಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡದ ಬಳಿ ಕನಿಷ್ಠ 0.05 ಕೋಟಿ ಮೊತ್ತವಿದೆ. ಸನ್‌ರೈಸರ್ಸ್ ಹೈದರಾಬಾದ್ 6.55 ಕೋಟಿ, ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 4.45 ಕೋಟಿ, ಲಕ್ನೋ ಸೂಪರ್ ಜೈಂಟ್ಸ್ 3.55 ಕೋಟಿ, ರಾಜಸ್ಥಾನ ರಾಯಲ್ಸ್ 3.35 ಕೋಟಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು 1.75 ಕೋಟಿ, ಕೋಲ್ಕತ್ತಾ ನೈಟ್ ರೈಡರ್ಸ್ 1.65 ಕೋಟಿ, ಚೆನ್ನೈ 1.65 ಕೋಟಿ ರೂಪಾಯಿ ಹೊಂದಿದೆ.

ಈ ಬಾರಿ ಹಲವು ವಿದೇಶಿ ಆಟಗಾರರು ಹರಾಜಿನಲ್ಲಿ ಭಾಗಿ?
ವಾಸ್ತವವಾಗಿ, ಐಪಿಎಲ್‌ನ ಮೆಗಾ ಹರಾಜು ಪ್ರತಿ 4 ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಐಪಿಎಲ್ ಮಿನಿ ಹರಾಜು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ಮಿನಿ ಹರಾಜಿನಲ್ಲಿ ಹಲವು ವಿದೇಶಿ ಆಟಗಾರರು ಭಾಗವಹಿಸಬಹುದು. ಇತ್ತೀಚೆಗೆ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಎಂಟು ವರ್ಷಗಳ ನಂತರ ಐಪಿಎಲ್‌ಗೆ ಮರಳಬಹುದು ಎಂದು ಹೇಳಿದ್ದಾರೆ. ಇದಲ್ಲದೇ ಸ್ಯಾಮ್ ಬಿಲ್ಲಿಂಗ್ಸ್, ಜೆರಾಲ್ಡ್ ಕುಟೀಸ್, ಟ್ರಾವಿಸ್ ಹೆಡ್, ಕ್ರಿಸ್ ವೋಕ್ಸ್ ಕೂಡ ಸೇರ್ಪಡೆಯಾಗುವ ಸಾಧ್ಯತೆ ಇದೆ.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

6 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

6 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

6 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

7 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

7 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

7 hours ago