ಕ್ರೀಡೆ

ಡಿಸೆಂಬರ್ 19ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!

ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಕ್ರಿಕೆಟ್ ವೆಬ್‌ಸೈಟ್ ಕ್ರಿಕ್ ಇನ್ಫೋ ಪ್ರಕಾರ, 10 ಐಪಿಎಲ್ ತಂಡಗಳಿಗೆ ನವೆಂಬರ್ 15ರವರೆಗೆ ಸಮಯವಿದೆ. ಇದರಲ್ಲಿ ಅವರು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತಕ್ಕೆ ಸಲ್ಲಿಸಬಹುದು. ಇದಾದ ನಂತರ ಡಿಸೆಂಬರ್ ಮೊದಲ ವಾರದೊಳಗೆ ಹರಾಜು ಪಟ್ಟಿ ಸಿದ್ಧಗೊಳ್ಳಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆಟಗಾರರನ್ನು ಖರೀದಿಸಲು ತಂಡಗಳು 5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬಿಡ್ ಮಾಡಬಹುದು. ಮಾಧ್ಯಮ ವರದಿಗಳ ಪ್ರಕಾರ, ಕಳೆದ ಋತುವಿನಲ್ಲಿ ಫ್ರಾಂಚೈಸಿಗೆ 95 ಕೋಟಿ ರೂಪಾಯಿ ನೀಡಲಾಗಿತ್ತು ಈ ಬಾರಿ 100 ಕೋಟಿಗೆ ಏರಿಸಲಾಗಿದೆ. ಅದಲ್ಲದೆ, ತಂಡಗಳು ಹಿಂದಿನ ಋತುವಿನ ಅಂದರೆ 2023ರ ಉಳಿದ ಮೊತ್ತವನ್ನು ಸಹ ಇಲ್ಲಿ ಬಿಡ್ ಮಾಡಬಹುದು.

ಪಂಜಾಬ್ ಕಿಂಗ್ಸ್ ಹೆಚ್ಚು ಹಣ ಹೊಂದಿದೆ
2024ರ ಐಪಿಎಲ್ ಋತುವಿಗೆ ತಂಡವನ್ನು ಸಿದ್ಧಪಡಿಸಲು ಪಂಜಾಬ್ ಕಿಂಗ್ಸ್ ಅತ್ಯಧಿಕ ಮೊತ್ತವನ್ನು ಹೊಂದಿದೆ. ಪಂಜಾಬ್ ಕಿಂಗ್ಸ್ ಗೆ ಕಳೆದ ಋತುವಿನಲ್ಲಿ 12.20 ಕೋಟಿ ರೂಪಾಯಿ ಉಳಿದಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡದ ಬಳಿ ಕನಿಷ್ಠ 0.05 ಕೋಟಿ ಮೊತ್ತವಿದೆ. ಸನ್‌ರೈಸರ್ಸ್ ಹೈದರಾಬಾದ್ 6.55 ಕೋಟಿ, ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 4.45 ಕೋಟಿ, ಲಕ್ನೋ ಸೂಪರ್ ಜೈಂಟ್ಸ್ 3.55 ಕೋಟಿ, ರಾಜಸ್ಥಾನ ರಾಯಲ್ಸ್ 3.35 ಕೋಟಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು 1.75 ಕೋಟಿ, ಕೋಲ್ಕತ್ತಾ ನೈಟ್ ರೈಡರ್ಸ್ 1.65 ಕೋಟಿ, ಚೆನ್ನೈ 1.65 ಕೋಟಿ ರೂಪಾಯಿ ಹೊಂದಿದೆ.

ಈ ಬಾರಿ ಹಲವು ವಿದೇಶಿ ಆಟಗಾರರು ಹರಾಜಿನಲ್ಲಿ ಭಾಗಿ?
ವಾಸ್ತವವಾಗಿ, ಐಪಿಎಲ್‌ನ ಮೆಗಾ ಹರಾಜು ಪ್ರತಿ 4 ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಐಪಿಎಲ್ ಮಿನಿ ಹರಾಜು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ಮಿನಿ ಹರಾಜಿನಲ್ಲಿ ಹಲವು ವಿದೇಶಿ ಆಟಗಾರರು ಭಾಗವಹಿಸಬಹುದು. ಇತ್ತೀಚೆಗೆ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಎಂಟು ವರ್ಷಗಳ ನಂತರ ಐಪಿಎಲ್‌ಗೆ ಮರಳಬಹುದು ಎಂದು ಹೇಳಿದ್ದಾರೆ. ಇದಲ್ಲದೇ ಸ್ಯಾಮ್ ಬಿಲ್ಲಿಂಗ್ಸ್, ಜೆರಾಲ್ಡ್ ಕುಟೀಸ್, ಟ್ರಾವಿಸ್ ಹೆಡ್, ಕ್ರಿಸ್ ವೋಕ್ಸ್ ಕೂಡ ಸೇರ್ಪಡೆಯಾಗುವ ಸಾಧ್ಯತೆ ಇದೆ.

andolanait

Recent Posts

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

40 mins ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

2 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

2 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

5 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

5 hours ago