ಕ್ರೀಡೆ

ಡಿಸೆಂಬರ್ 19ರಂದು ದುಬೈನಲ್ಲಿ 2024ರ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ!

ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಕ್ರಿಕೆಟ್ ವೆಬ್‌ಸೈಟ್ ಕ್ರಿಕ್ ಇನ್ಫೋ ಪ್ರಕಾರ, 10 ಐಪಿಎಲ್ ತಂಡಗಳಿಗೆ ನವೆಂಬರ್ 15ರವರೆಗೆ ಸಮಯವಿದೆ. ಇದರಲ್ಲಿ ಅವರು ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತಕ್ಕೆ ಸಲ್ಲಿಸಬಹುದು. ಇದಾದ ನಂತರ ಡಿಸೆಂಬರ್ ಮೊದಲ ವಾರದೊಳಗೆ ಹರಾಜು ಪಟ್ಟಿ ಸಿದ್ಧಗೊಳ್ಳಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆಟಗಾರರನ್ನು ಖರೀದಿಸಲು ತಂಡಗಳು 5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬಿಡ್ ಮಾಡಬಹುದು. ಮಾಧ್ಯಮ ವರದಿಗಳ ಪ್ರಕಾರ, ಕಳೆದ ಋತುವಿನಲ್ಲಿ ಫ್ರಾಂಚೈಸಿಗೆ 95 ಕೋಟಿ ರೂಪಾಯಿ ನೀಡಲಾಗಿತ್ತು ಈ ಬಾರಿ 100 ಕೋಟಿಗೆ ಏರಿಸಲಾಗಿದೆ. ಅದಲ್ಲದೆ, ತಂಡಗಳು ಹಿಂದಿನ ಋತುವಿನ ಅಂದರೆ 2023ರ ಉಳಿದ ಮೊತ್ತವನ್ನು ಸಹ ಇಲ್ಲಿ ಬಿಡ್ ಮಾಡಬಹುದು.

ಪಂಜಾಬ್ ಕಿಂಗ್ಸ್ ಹೆಚ್ಚು ಹಣ ಹೊಂದಿದೆ
2024ರ ಐಪಿಎಲ್ ಋತುವಿಗೆ ತಂಡವನ್ನು ಸಿದ್ಧಪಡಿಸಲು ಪಂಜಾಬ್ ಕಿಂಗ್ಸ್ ಅತ್ಯಧಿಕ ಮೊತ್ತವನ್ನು ಹೊಂದಿದೆ. ಪಂಜಾಬ್ ಕಿಂಗ್ಸ್ ಗೆ ಕಳೆದ ಋತುವಿನಲ್ಲಿ 12.20 ಕೋಟಿ ರೂಪಾಯಿ ಉಳಿದಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡದ ಬಳಿ ಕನಿಷ್ಠ 0.05 ಕೋಟಿ ಮೊತ್ತವಿದೆ. ಸನ್‌ರೈಸರ್ಸ್ ಹೈದರಾಬಾದ್ 6.55 ಕೋಟಿ, ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 4.45 ಕೋಟಿ, ಲಕ್ನೋ ಸೂಪರ್ ಜೈಂಟ್ಸ್ 3.55 ಕೋಟಿ, ರಾಜಸ್ಥಾನ ರಾಯಲ್ಸ್ 3.35 ಕೋಟಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು 1.75 ಕೋಟಿ, ಕೋಲ್ಕತ್ತಾ ನೈಟ್ ರೈಡರ್ಸ್ 1.65 ಕೋಟಿ, ಚೆನ್ನೈ 1.65 ಕೋಟಿ ರೂಪಾಯಿ ಹೊಂದಿದೆ.

ಈ ಬಾರಿ ಹಲವು ವಿದೇಶಿ ಆಟಗಾರರು ಹರಾಜಿನಲ್ಲಿ ಭಾಗಿ?
ವಾಸ್ತವವಾಗಿ, ಐಪಿಎಲ್‌ನ ಮೆಗಾ ಹರಾಜು ಪ್ರತಿ 4 ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಐಪಿಎಲ್ ಮಿನಿ ಹರಾಜು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ಮಿನಿ ಹರಾಜಿನಲ್ಲಿ ಹಲವು ವಿದೇಶಿ ಆಟಗಾರರು ಭಾಗವಹಿಸಬಹುದು. ಇತ್ತೀಚೆಗೆ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಎಂಟು ವರ್ಷಗಳ ನಂತರ ಐಪಿಎಲ್‌ಗೆ ಮರಳಬಹುದು ಎಂದು ಹೇಳಿದ್ದಾರೆ. ಇದಲ್ಲದೇ ಸ್ಯಾಮ್ ಬಿಲ್ಲಿಂಗ್ಸ್, ಜೆರಾಲ್ಡ್ ಕುಟೀಸ್, ಟ್ರಾವಿಸ್ ಹೆಡ್, ಕ್ರಿಸ್ ವೋಕ್ಸ್ ಕೂಡ ಸೇರ್ಪಡೆಯಾಗುವ ಸಾಧ್ಯತೆ ಇದೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago