ಕ್ರೀಡೆ

215 ಕಿ.ಮೀ. ವೇಗದಲ್ಲಿ ಲ್ಯಾಂಬೋರ್ಗಿನಿ ಕಾರು ಚಾಲನೆ: ರೋಹಿತ್ ಶರ್ಮಾಗೆ ದಂಡ

ಪುಣೆ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಲಯದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿಗಳ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ಅವರು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ ವಿವಾದಕ್ಕೆ ಒಳಗಾಗಿದ್ದಾರೆ ಎಂದು ಪುಣೆ ಟೈಮ್ಸ್ ಮಿರರ್ ವರದಿ ಮಾಡಿದೆ.

ರೋಹಿತ್ ತಮ್ಮ ಲ್ಯಾಂಬೋರ್ಗಿನಿ ಕಾರನ್ನು ಪ್ರತಿ ಗಂಟೆಗೆ 215 ಕಿ.ಮೀ. ವೇಗದಲ್ಲಿ ಚಲಾಯಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ದಂಡದ ಮೂರು ರಶೀದಿಗಳನ್ನು ಆನ್‌ಲೈನ್ ಮೂಲಕ ಪೊಲೀಸರು ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಯಾವ ದಿನ ರೋಹಿತ್ ಕಾರು ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ರೋಹಿತ್ ಅವರ ಕಾರಿನ ವೇಗವು ಕೆಲವೊಮ್ಮೆ ಗಂಟೆಗೆ 215 ಕಿ.ಮೀ. ಅನ್ನು ಮುಟ್ಟಿದೆ ಎಂದು ಸಂಚಾರ ವಿಭಾಗದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಪಂದ್ಯಾವಳಿಯು ನಡೆಯುತ್ತಿರುವಾಗ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಂಡದ ಬಸ್‌ನಲ್ಲಿ ರೋಹಿತ್ ಪ್ರಯಾಣಿಸಬೇಕಾಗಿತ್ತು ಎಂದು ವರದಿ ತಿಳಿಸಿದೆ.

ಅಕ್ಟೋಬರ್ 14ರಂದು ಅಹ್ಮದಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಆಡಿದ ನಂತರ ಭಾರತ ತಂಡ ಭಾನುವಾರವೇ ಪುಣೆ ನಗರಕ್ಕೆ ಬಂದಿಳಿದಿದೆ. ಸೋಮವಾರ ವಿಶ್ರಾಂತಿ ದಿನವಾಗಿದ್ದರಿಂದ ರೋಹಿತ್ ಅವರು ಬಹುಶಃ ಕುಟುಂಬದೊಂದಿಗೆ ಸಮಯ ಕಳೆಯಲು ಮುಂಬೈನಲ್ಲಿ ಉಳಿದುಕೊಂಡಿರಬಹುದು ಎಂದು ಹೇಳಲಾಗಿದೆ.

ರೋಹಿತ್ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹಾಗೂ ಕಳವಳ ವ್ಯಕ್ತವಾಗಿದೆ. ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯ ಸಂದರ್ಭಗಳಲ್ಲಿ ಟೀಮ್ ಇಂಡಿಯಾ ನಾಯಕ ಎಚ್ಚರಿಕೆಯಿಂದ ಇರಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.

ಇಷ್ಟು ವೇಗದಲ್ಲಿ ವಾಹನ ಚಲಾಯಿಸಿ ನಿಮಗಷ್ಟೇ ಅಲ್ಲದೆ ನಿಮ್ಮ ಕುಟುಂಬದವರಿಗೂ ಸುತ್ತಮುತ್ತಲಿನವರಿಗೂ ಅನಗತ್ಯ ತೊಂದರೆ ಕೊಡುವುದೇಕೆ? ಜನಪ್ರಿಯ ವ್ಯಕ್ತಿಯಾಗಿ ಸಾರ್ವಜನಿಕರಿಗೆ ಮಾದರಿಯಾಗಿರಿ ಎಂದು ನೆಟ್ಟಿಗರೊಬ್ಬರು ರೋಹಿತ್‌ಗೆ ಕಿವಿ ಮಾತು ಹೇಳಿದ್ದಾರೆ.

andolanait

Recent Posts

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

17 mins ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

44 mins ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

1 hour ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

2 hours ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

2 hours ago