ಕ್ರೀಡೆ

215 ಕಿ.ಮೀ. ವೇಗದಲ್ಲಿ ಲ್ಯಾಂಬೋರ್ಗಿನಿ ಕಾರು ಚಾಲನೆ: ರೋಹಿತ್ ಶರ್ಮಾಗೆ ದಂಡ

ಪುಣೆ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಲಯದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿಗಳ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ಅವರು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ ವಿವಾದಕ್ಕೆ ಒಳಗಾಗಿದ್ದಾರೆ ಎಂದು ಪುಣೆ ಟೈಮ್ಸ್ ಮಿರರ್ ವರದಿ ಮಾಡಿದೆ.

ರೋಹಿತ್ ತಮ್ಮ ಲ್ಯಾಂಬೋರ್ಗಿನಿ ಕಾರನ್ನು ಪ್ರತಿ ಗಂಟೆಗೆ 215 ಕಿ.ಮೀ. ವೇಗದಲ್ಲಿ ಚಲಾಯಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ದಂಡದ ಮೂರು ರಶೀದಿಗಳನ್ನು ಆನ್‌ಲೈನ್ ಮೂಲಕ ಪೊಲೀಸರು ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಯಾವ ದಿನ ರೋಹಿತ್ ಕಾರು ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ರೋಹಿತ್ ಅವರ ಕಾರಿನ ವೇಗವು ಕೆಲವೊಮ್ಮೆ ಗಂಟೆಗೆ 215 ಕಿ.ಮೀ. ಅನ್ನು ಮುಟ್ಟಿದೆ ಎಂದು ಸಂಚಾರ ವಿಭಾಗದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಪಂದ್ಯಾವಳಿಯು ನಡೆಯುತ್ತಿರುವಾಗ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಂಡದ ಬಸ್‌ನಲ್ಲಿ ರೋಹಿತ್ ಪ್ರಯಾಣಿಸಬೇಕಾಗಿತ್ತು ಎಂದು ವರದಿ ತಿಳಿಸಿದೆ.

ಅಕ್ಟೋಬರ್ 14ರಂದು ಅಹ್ಮದಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಆಡಿದ ನಂತರ ಭಾರತ ತಂಡ ಭಾನುವಾರವೇ ಪುಣೆ ನಗರಕ್ಕೆ ಬಂದಿಳಿದಿದೆ. ಸೋಮವಾರ ವಿಶ್ರಾಂತಿ ದಿನವಾಗಿದ್ದರಿಂದ ರೋಹಿತ್ ಅವರು ಬಹುಶಃ ಕುಟುಂಬದೊಂದಿಗೆ ಸಮಯ ಕಳೆಯಲು ಮುಂಬೈನಲ್ಲಿ ಉಳಿದುಕೊಂಡಿರಬಹುದು ಎಂದು ಹೇಳಲಾಗಿದೆ.

ರೋಹಿತ್ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹಾಗೂ ಕಳವಳ ವ್ಯಕ್ತವಾಗಿದೆ. ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯ ಸಂದರ್ಭಗಳಲ್ಲಿ ಟೀಮ್ ಇಂಡಿಯಾ ನಾಯಕ ಎಚ್ಚರಿಕೆಯಿಂದ ಇರಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.

ಇಷ್ಟು ವೇಗದಲ್ಲಿ ವಾಹನ ಚಲಾಯಿಸಿ ನಿಮಗಷ್ಟೇ ಅಲ್ಲದೆ ನಿಮ್ಮ ಕುಟುಂಬದವರಿಗೂ ಸುತ್ತಮುತ್ತಲಿನವರಿಗೂ ಅನಗತ್ಯ ತೊಂದರೆ ಕೊಡುವುದೇಕೆ? ಜನಪ್ರಿಯ ವ್ಯಕ್ತಿಯಾಗಿ ಸಾರ್ವಜನಿಕರಿಗೆ ಮಾದರಿಯಾಗಿರಿ ಎಂದು ನೆಟ್ಟಿಗರೊಬ್ಬರು ರೋಹಿತ್‌ಗೆ ಕಿವಿ ಮಾತು ಹೇಳಿದ್ದಾರೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

1 hour ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

3 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago