ಕ್ರೀಡೆ

215 ಕಿ.ಮೀ. ವೇಗದಲ್ಲಿ ಲ್ಯಾಂಬೋರ್ಗಿನಿ ಕಾರು ಚಾಲನೆ: ರೋಹಿತ್ ಶರ್ಮಾಗೆ ದಂಡ

ಪುಣೆ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಲಯದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿಗಳ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ಅವರು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ ವಿವಾದಕ್ಕೆ ಒಳಗಾಗಿದ್ದಾರೆ ಎಂದು ಪುಣೆ ಟೈಮ್ಸ್ ಮಿರರ್ ವರದಿ ಮಾಡಿದೆ.

ರೋಹಿತ್ ತಮ್ಮ ಲ್ಯಾಂಬೋರ್ಗಿನಿ ಕಾರನ್ನು ಪ್ರತಿ ಗಂಟೆಗೆ 215 ಕಿ.ಮೀ. ವೇಗದಲ್ಲಿ ಚಲಾಯಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ದಂಡದ ಮೂರು ರಶೀದಿಗಳನ್ನು ಆನ್‌ಲೈನ್ ಮೂಲಕ ಪೊಲೀಸರು ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಯಾವ ದಿನ ರೋಹಿತ್ ಕಾರು ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ರೋಹಿತ್ ಅವರ ಕಾರಿನ ವೇಗವು ಕೆಲವೊಮ್ಮೆ ಗಂಟೆಗೆ 215 ಕಿ.ಮೀ. ಅನ್ನು ಮುಟ್ಟಿದೆ ಎಂದು ಸಂಚಾರ ವಿಭಾಗದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಪಂದ್ಯಾವಳಿಯು ನಡೆಯುತ್ತಿರುವಾಗ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಂಡದ ಬಸ್‌ನಲ್ಲಿ ರೋಹಿತ್ ಪ್ರಯಾಣಿಸಬೇಕಾಗಿತ್ತು ಎಂದು ವರದಿ ತಿಳಿಸಿದೆ.

ಅಕ್ಟೋಬರ್ 14ರಂದು ಅಹ್ಮದಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಆಡಿದ ನಂತರ ಭಾರತ ತಂಡ ಭಾನುವಾರವೇ ಪುಣೆ ನಗರಕ್ಕೆ ಬಂದಿಳಿದಿದೆ. ಸೋಮವಾರ ವಿಶ್ರಾಂತಿ ದಿನವಾಗಿದ್ದರಿಂದ ರೋಹಿತ್ ಅವರು ಬಹುಶಃ ಕುಟುಂಬದೊಂದಿಗೆ ಸಮಯ ಕಳೆಯಲು ಮುಂಬೈನಲ್ಲಿ ಉಳಿದುಕೊಂಡಿರಬಹುದು ಎಂದು ಹೇಳಲಾಗಿದೆ.

ರೋಹಿತ್ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹಾಗೂ ಕಳವಳ ವ್ಯಕ್ತವಾಗಿದೆ. ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯ ಸಂದರ್ಭಗಳಲ್ಲಿ ಟೀಮ್ ಇಂಡಿಯಾ ನಾಯಕ ಎಚ್ಚರಿಕೆಯಿಂದ ಇರಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.

ಇಷ್ಟು ವೇಗದಲ್ಲಿ ವಾಹನ ಚಲಾಯಿಸಿ ನಿಮಗಷ್ಟೇ ಅಲ್ಲದೆ ನಿಮ್ಮ ಕುಟುಂಬದವರಿಗೂ ಸುತ್ತಮುತ್ತಲಿನವರಿಗೂ ಅನಗತ್ಯ ತೊಂದರೆ ಕೊಡುವುದೇಕೆ? ಜನಪ್ರಿಯ ವ್ಯಕ್ತಿಯಾಗಿ ಸಾರ್ವಜನಿಕರಿಗೆ ಮಾದರಿಯಾಗಿರಿ ಎಂದು ನೆಟ್ಟಿಗರೊಬ್ಬರು ರೋಹಿತ್‌ಗೆ ಕಿವಿ ಮಾತು ಹೇಳಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago