ಕ್ರೀಡೆ

ಜೊಕೋವಿಕ್ ಮಡಿಲಿಗೆ 23 ನೇ ಗ್ರ್ಯಾನ್‌ಸ್ಲಾಮ್‌

ಪ್ಯಾರಿಸ್‌: ಟೆನಿಸ್‌ ಲೋಕದ ಸೂಪರ್‌ಸ್ಟಾರ್‌ ನೊವಾಕ್‌ ಜೊಕೋವಿಕ್‌ ಭಾನುವಾರ ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದರು. ಅತ್ಯಧಿಕ 23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೊಂದಿಗೆ ಬಹಳ ಎತ್ತರ ತಲುಪಿದರು. ಈ ಸಾಧನೆಯೊಂದಿಗೆ ಜೊಕೋ ಸಮಕಾಲೀನ ಟೆನಿಸ್‌ನ ಮತ್ತೋರ್ವ ದೈತ್ಯ ರಫೆಲ್‌ ನಡಾಲ್‌ ಅವರನ್ನು ಹಿಂದಿಕ್ಕಿದರು. ನಡಾಲ್‌ 22 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ನಡೆದ ಫೈನಲ್‌ನಲ್ಲಿ ಜೊಕೋವಿಕ್‌ ನಾರ್ವೆಯ ಕ್ಯಾಸ್ಪರ್‌ ರೂಡ್‌ ವಿರುದ್ಧ 7-6 (7-1), 6-3, 7-5 ಅಂತರದ ಗೆಲುವು ಸಾಧಿಸಿದರು. ಇದು ಸರ್ಬಿಯನ್‌ ಟೆನಿಸಿಗನಿಗೆ ಒಲಿದ 3ನೇ ಫ್ರೆಂಚ್‌ ಓಪನ್‌ ಪ್ರಶಸ್ತಿ. ಇದು ಅವರ 34ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಹಾಗೂ 7ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು.

ಇನ್ನೊಂದೆಡೆ ಕ್ಯಾಸ್ಪರ್‌ ರೂಡ್‌ ಮೊದಲ ಗ್ರ್ಯಾನ್‌ಸ್ಲಾಮ್‌ ಕನಸು ಕಾಣುತ್ತಿದ್ದರು. ಅವರಿಗೆ ಇದು ಸತತ 2ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು. ಕಳೆದ ವರ್ಷ ರಫೆಲ್‌ ನಡಾಲ್‌ಗೆ ಶರಣಾಗಿದ್ದರು.

ಜೊಕೋವಿಕ್‌ ಪ್ರಶಸ್ತಿ ಚೀಲದಲ್ಲಿ 10 ಆಸ್ಟ್ರೇಲಿಯನ್‌ ಓಪನ್‌, 3 ಫ್ರೆಂಚ್‌ ಓಪನ್‌, 7 ವಿಂಬಲ್ಡನ್‌ ಹಾಗೂ 3 ಯುಎಸ್‌ ಓಪನ್‌ ಟ್ರೋಫಿಗಳು ತುಂಬಿವೆ. 2008ರಲ್ಲಿ ವಿಂಬಲ್ಡನ್‌ ಗೆಲ್ಲುವ ಮೂಲಕ ಜೊಕೋವಿಕ್‌ ಅವರ ಗ್ರ್ಯಾನ್‌ಸ್ಲಾಮ್‌ ಅಭಿಯಾನ ಮೊದಲ್ಗೊಂಡಿತ್ತು.

andolanait

Recent Posts

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

15 mins ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

19 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

29 mins ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

42 mins ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

4 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

4 hours ago