ಕ್ರೀಡೆ

ಜೊಕೋವಿಕ್ ಮಡಿಲಿಗೆ 23 ನೇ ಗ್ರ್ಯಾನ್‌ಸ್ಲಾಮ್‌

ಪ್ಯಾರಿಸ್‌: ಟೆನಿಸ್‌ ಲೋಕದ ಸೂಪರ್‌ಸ್ಟಾರ್‌ ನೊವಾಕ್‌ ಜೊಕೋವಿಕ್‌ ಭಾನುವಾರ ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದರು. ಅತ್ಯಧಿಕ 23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೊಂದಿಗೆ ಬಹಳ ಎತ್ತರ ತಲುಪಿದರು. ಈ ಸಾಧನೆಯೊಂದಿಗೆ ಜೊಕೋ ಸಮಕಾಲೀನ ಟೆನಿಸ್‌ನ ಮತ್ತೋರ್ವ ದೈತ್ಯ ರಫೆಲ್‌ ನಡಾಲ್‌ ಅವರನ್ನು ಹಿಂದಿಕ್ಕಿದರು. ನಡಾಲ್‌ 22 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ನಡೆದ ಫೈನಲ್‌ನಲ್ಲಿ ಜೊಕೋವಿಕ್‌ ನಾರ್ವೆಯ ಕ್ಯಾಸ್ಪರ್‌ ರೂಡ್‌ ವಿರುದ್ಧ 7-6 (7-1), 6-3, 7-5 ಅಂತರದ ಗೆಲುವು ಸಾಧಿಸಿದರು. ಇದು ಸರ್ಬಿಯನ್‌ ಟೆನಿಸಿಗನಿಗೆ ಒಲಿದ 3ನೇ ಫ್ರೆಂಚ್‌ ಓಪನ್‌ ಪ್ರಶಸ್ತಿ. ಇದು ಅವರ 34ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಹಾಗೂ 7ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು.

ಇನ್ನೊಂದೆಡೆ ಕ್ಯಾಸ್ಪರ್‌ ರೂಡ್‌ ಮೊದಲ ಗ್ರ್ಯಾನ್‌ಸ್ಲಾಮ್‌ ಕನಸು ಕಾಣುತ್ತಿದ್ದರು. ಅವರಿಗೆ ಇದು ಸತತ 2ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು. ಕಳೆದ ವರ್ಷ ರಫೆಲ್‌ ನಡಾಲ್‌ಗೆ ಶರಣಾಗಿದ್ದರು.

ಜೊಕೋವಿಕ್‌ ಪ್ರಶಸ್ತಿ ಚೀಲದಲ್ಲಿ 10 ಆಸ್ಟ್ರೇಲಿಯನ್‌ ಓಪನ್‌, 3 ಫ್ರೆಂಚ್‌ ಓಪನ್‌, 7 ವಿಂಬಲ್ಡನ್‌ ಹಾಗೂ 3 ಯುಎಸ್‌ ಓಪನ್‌ ಟ್ರೋಫಿಗಳು ತುಂಬಿವೆ. 2008ರಲ್ಲಿ ವಿಂಬಲ್ಡನ್‌ ಗೆಲ್ಲುವ ಮೂಲಕ ಜೊಕೋವಿಕ್‌ ಅವರ ಗ್ರ್ಯಾನ್‌ಸ್ಲಾಮ್‌ ಅಭಿಯಾನ ಮೊದಲ್ಗೊಂಡಿತ್ತು.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

3 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

4 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago