ಕ್ರೀಡೆ

ಜೊಕೋವಿಕ್ ಮಡಿಲಿಗೆ 23 ನೇ ಗ್ರ್ಯಾನ್‌ಸ್ಲಾಮ್‌

ಪ್ಯಾರಿಸ್‌: ಟೆನಿಸ್‌ ಲೋಕದ ಸೂಪರ್‌ಸ್ಟಾರ್‌ ನೊವಾಕ್‌ ಜೊಕೋವಿಕ್‌ ಭಾನುವಾರ ರೊಲ್ಯಾಂಡ್‌ ಗ್ಯಾರೋಸ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದರು. ಅತ್ಯಧಿಕ 23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೊಂದಿಗೆ ಬಹಳ ಎತ್ತರ ತಲುಪಿದರು. ಈ ಸಾಧನೆಯೊಂದಿಗೆ ಜೊಕೋ ಸಮಕಾಲೀನ ಟೆನಿಸ್‌ನ ಮತ್ತೋರ್ವ ದೈತ್ಯ ರಫೆಲ್‌ ನಡಾಲ್‌ ಅವರನ್ನು ಹಿಂದಿಕ್ಕಿದರು. ನಡಾಲ್‌ 22 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ನಡೆದ ಫೈನಲ್‌ನಲ್ಲಿ ಜೊಕೋವಿಕ್‌ ನಾರ್ವೆಯ ಕ್ಯಾಸ್ಪರ್‌ ರೂಡ್‌ ವಿರುದ್ಧ 7-6 (7-1), 6-3, 7-5 ಅಂತರದ ಗೆಲುವು ಸಾಧಿಸಿದರು. ಇದು ಸರ್ಬಿಯನ್‌ ಟೆನಿಸಿಗನಿಗೆ ಒಲಿದ 3ನೇ ಫ್ರೆಂಚ್‌ ಓಪನ್‌ ಪ್ರಶಸ್ತಿ. ಇದು ಅವರ 34ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಹಾಗೂ 7ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು.

ಇನ್ನೊಂದೆಡೆ ಕ್ಯಾಸ್ಪರ್‌ ರೂಡ್‌ ಮೊದಲ ಗ್ರ್ಯಾನ್‌ಸ್ಲಾಮ್‌ ಕನಸು ಕಾಣುತ್ತಿದ್ದರು. ಅವರಿಗೆ ಇದು ಸತತ 2ನೇ ಫ್ರೆಂಚ್‌ ಓಪನ್‌ ಫೈನಲ್‌ ಆಗಿತ್ತು. ಕಳೆದ ವರ್ಷ ರಫೆಲ್‌ ನಡಾಲ್‌ಗೆ ಶರಣಾಗಿದ್ದರು.

ಜೊಕೋವಿಕ್‌ ಪ್ರಶಸ್ತಿ ಚೀಲದಲ್ಲಿ 10 ಆಸ್ಟ್ರೇಲಿಯನ್‌ ಓಪನ್‌, 3 ಫ್ರೆಂಚ್‌ ಓಪನ್‌, 7 ವಿಂಬಲ್ಡನ್‌ ಹಾಗೂ 3 ಯುಎಸ್‌ ಓಪನ್‌ ಟ್ರೋಫಿಗಳು ತುಂಬಿವೆ. 2008ರಲ್ಲಿ ವಿಂಬಲ್ಡನ್‌ ಗೆಲ್ಲುವ ಮೂಲಕ ಜೊಕೋವಿಕ್‌ ಅವರ ಗ್ರ್ಯಾನ್‌ಸ್ಲಾಮ್‌ ಅಭಿಯಾನ ಮೊದಲ್ಗೊಂಡಿತ್ತು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

10 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago