ಕ್ರೀಡೆ

ಗೂಗಲ್‌ಗೆ 25 ವರ್ಷ; ಅತಿಹೆಚ್ಚು ಹುಡುಕಲ್ಪಟ್ಟ ಕ್ರಿಕೆಟರ್‌ ಯಾರೆಂದು ತಿಳಿಸಿದ ಗೂಗಲ್‌

ಜಗತ್ತಿನ ಪ್ರಸಿದ್ಧ ಸರ್ಜ್‌ ಎಂಜಿನ್‌ ಆಗಿರುವ ಗೂಗಲ್‌ ಈ ವರ್ಷದ ಮೂಲಕ ತನ್ನ 25 ವರ್ಷಗಳ ಸೇವೆಯನ್ನು ಪೂರೈಸಿದ್ದು, ಈ ವಿಶೇಷ ವಾರ್ಷಿಕೋತ್ಸವದ ವೇಳೆ ವಿಡಿಯೊವೊಂದನ್ನು ಹಂಚಿಕೊಂಡಿದೆ. ಕಳೆದ 25 ವರ್ಷಗಳಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ವ್ಯಕ್ತಿಗಳು, ವಿಷಯಗಳು ಹಾಗೂ ವಸ್ತುಗಳನ್ನು ಬಿಚ್ಚಿಟ್ಟಿದೆ.

ವಿವಿಧ ವಿಭಾಗಗಳಲ್ಲಿ ಯಾರನ್ನು ಹೆಚ್ಚಾಗಿ ನೆಟ್ಟಿಗರು ಹುಡುಕಿದ್ದಾರೆ ಎಂಬುದು ಬಹಿರಂಗವಾಗಿದ್ದು, ಗೂಗಲ್‌ ಇತಿಹಾಸದಲ್ಲಿ ವಿರಾಟ್‌ ಕೊಹ್ಲಿ ಅತಿಹೆಚ್ಚು ಹುಡುಕಲ್ಪಟ್ಟ ಕ್ರಿಕೆಟರ್‌ ಎನಿಸಿಕೊಂಡಿದ್ದಾರೆ. 3 ನಿಮಿಷ 48 ಸೆಕೆಂಡುಗಳ ವಿಡಿಯೊ ಇದಾಗಿದ್ದು, ರೊನಾಲ್ಡೊ ಅತಿಹೆಚ್ಚು ಹುಡುಕಲ್ಪಟ್ಟ ಫುಟ್‌ಬಾಲರ್‌, ಅತಿಹೆಚ್ಚು ಹುಡುಕಾಡಿದ ಆನಿಮೇಷನ್‌ ಪೊಕಿಮಾನ್‌, ಅತಿಹೆಚ್ಚು ಹುಡುಕಲ್ಪಟ್ಟ ಮ್ಯೂಸಿಕ್‌ ಬ್ಯಾಂಡ್‌ ಬಿಟಿಎಸ್‌, ಅತಿಹೆಚ್ಚು ಹುಡುಕಲ್ಪಟ್ಟ ಗೊಂಬೆ ಬಾರ್ಬಿ, ಅತಿಹೆಚ್ಚು ಹುಡುಕಲ್ಪಟ್ಟ ಸೂಪರ್‌ ಹೀರೊ ಸ್ಪೈಡರ್‌ಮ್ಯಾನ್‌, ಅತಿಹೆಚ್ಚು ಹುಡುಕಲ್ಪಟ್ಟ ಹೋರಾಟ ʼಬ್ಲಾಕ್‌ ಲಿವ್ಸ್‌ ಮ್ಯಾಟರ್ಸ್‌ʼ, ಅತಿಹೆಚ್ಚು ಹುಡುಕಲ್ಪಟ್ಟ ವಿಜ್ಞಾನಿ ಐನ್‌ಸ್ಟೈನ್‌ ಎಂದು ಗೂಗಲ್‌ ತಿಳಿಸಿದೆ.

andolana

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

6 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

42 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

55 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

2 hours ago