ಕ್ರೀಡೆ

ಏಕದಿನ 2ನೇ ಪಂದ್ಯ: ಭಾರತ ತಂಡದಲ್ಲಿ ಎರಡು ಬದಲಾವಣೆ

ಆಕ್ಲೆಂಡ್‌: ಆಕ್ಲೆಂಡ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸೋತಿರುವ ಧವನ್ ಪಡೆ ಇದೀಗ ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವು ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾಕ್ಕೆ  ಈ ಮೈದಾನದ ಹಳೆಯ ಟ್ರ್ಯಾಕ್ ರೆಕಾರ್ಡ್​ ಇನ್ನಷ್ಟು ಆತಂಕ ಹೆಚ್ಚಿಸಿದೆ. ಟೀಂ ಇಂಡಿಯಾ ಇಲ್ಲಿ ಆಡಿರುವ 7 ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಉಳಿದ 6 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಜಯ ಸಾಧಿಸಿದೆ. ಇದರಿಂದಾಗಿ ನಾಳೆ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಲಿದೆಯೇ ಎಂಬ ಕುತೂಹಲ ಮೂಡಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಲು ಬಯಸಿದೆ.

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿತ್ತಾದರೂ ಬೌಲಿಂಗ್ ವಿಭಾಗ ಅಟ್ಟರ್ ಫ್ಲಾಪ್ ಆಯಿತು. ಹೀಗಾಗಿ ಕಿವೀಸ್ ತಂಡ ನಿಗಧಿತ ಓವರ್​ಗಳಿಗಿಂತ ಮುಂಚೆಯೇ ಗುರಿ ಸಾಧಿಸಿತು. ಅದರಲ್ಲೂ ಪ್ರಮುಖ 3 ವಿಕೆಟ್​ಗಳನ್ನು ಬೇಗನೇ ಉರುಳಿಸದ ಭಾರತ ತಂಡಕ್ಕೆ ನಂತರ ಬಂದ ಕೇನ್ ವಿಲಿಯಮ್ಸನ್ ಹಾಗೂ ಲೇಥಮ್ ಸೋಲಿನ ಶಾಕ್ ನೀಡಿದರು. ಕೊನೆಯವರೆಗೂ ಅಜೇಯರಾಗಿ ಉಳಿದ ಈ ಜೋಡಿ ದಾಖಲೆಯ ದ್ವಿಶತಕದ ಜೊತೆಯಾಟ ಆಡಿತ್ತು.

ಇದರಲ್ಲಿ ಭಾರತದ ಬೌಲಿಂಗ್ ದಾಳಿಯಲ್ಲಿ ಆರನೇ ಬೌಲರ್ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಎರಡನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಈ ಕೊರತೆಯನ್ನು ನೀಗಿಸುವ ಸಾಧ್ಯತೆಗಳಿದ್ದು, ಹೀಗಾಗಿ ತಂಡದಲ್ಲಿ ಬದಲಾವಣೆಯಾಗಲಿವೆ ಎಂಬುದು ಪರಿಣಿತರ ಅಭಿಪ್ರಾಯವಾಗಿದೆ. ಪಂತ್ ಮತ್ತು ಸ್ಯಾಮ್ಸನ್ ಈ ಇಬ್ಬರು ವಿಕೆಟ್‌ಕೀಪರ್‌ಗಳೊಂದಿಗೆ ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯವನ್ನು ಆಡಿತ್ತು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ 6ನೇ ಬೌಲಿಂಗ್ ಆಯ್ಕೆಯನ್ನು ಟೀಂ ಇಂಡಿಯಾ ಪರಿಗಣಿಸಿದರೆ​ ಈ ಇಬ್ಬರಲ್ಲಿ ಒಬ್ಬರು ಬೆಂಚ್ ಕಾಯುವುದು ಖಚಿತ.

ಈ ಇಬ್ಬರಲ್ಲಿ ಒಬ್ಬರು ತಂಡದಿಂದ ಹೊರನಡೆದರೆ ಅವರ ಜಾಗದಲ್ಲಿ ದೀಪಕ್ ಹೂಡಾ ಆಯ್ಕೆಯಾಗುವ ಸಾಧ್ಯತೆಗಳವು ಹೆಚ್ಚಿವೆ. ಏಕೆಂದರೆ ಹೂಡಾ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಕೊಡುಗೆ ನೀಡಬಲ್ಲ ಆಟಗಾರ. ಅವರ ಆಫ್-ಸ್ಪಿನ್ ತಂಡಕ್ಕೆ ಉಪಯುಕ್ತವಾದರೆ, ಅವರು ಬ್ಯಾಟಿಂಗ್​ನಲ್ಲೂ ನಿರ್ಣಾಯಕ ಹಂತದಲ್ಲಿ ಸಹಕಾರಿಯಾಗಬಲ್ಲರು.

ಸ್ಪಿನ್ ವಿಭಾಗದ ಜವಬ್ದಾರಿ ಹೊತ್ತಿದ್ದ ಯುಜುವೇಂದ್ರ ಚಹಾಲ್ ಮೊದಲ ಏಕದಿನ ಪಂದ್ಯದಲ್ಲಿ ಅತ್ಯಂತ ದುಬಾರಿಯಾಗಿದ್ದರು. ತಮ್ಮ 10 ಓವರ್‌ ಕೋಟಾದಲ್ಲಿ ಬರೋಬ್ಬರಿ 67 ರನ್ ನೀಡಿದ ಚಾಹಲ್​ಗೆ ಒಂದೇ ಒಂದು ವಿಕೆಟ್ ಸಹ ಬಿದ್ದಿರಲಿಲ್ಲ. ಹೀಗಾಗಿ ಅವರ ಜಾಗದಲ್ಲಿ ಕುಲದೀಪ್ ಯಾದವ್‌ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago