ಕ್ರೀಡೆ

36ನೇ ರಾಷ್ಟ್ರೀಯ ಕ್ರೀಡಾಕೂಟ : ಮೈಸೂರಿನ ಖುಷಿಗೆ ಬೆಳ್ಳಿ ಪದಕ

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಮಾರಿ ಖುಷಿ ಹೆಚ್ ರವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿರುತ್ತದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷವಾಗಿದೆ.

ಕುಮಾರಿ ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆ ಮೈಸೂರು, ಇಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ನಂತರ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ಮುಂದೆ ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿ ಎನ್ನುತ್ತಾರೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಖುಷಿ.

andolanait

Recent Posts

ಮೈಸೂರು | ರೈಲು ಸೇವೆಗಳ ನಿಯಂತ್ರಣ, ಮರುನಿಗದಿ

ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…

10 mins ago

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

1 hour ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

3 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

3 hours ago