ಕ್ರೀಡೆ

36ನೇ ರಾಷ್ಟ್ರೀಯ ಕ್ರೀಡಾಕೂಟ : ಮೈಸೂರಿನ ಖುಷಿಗೆ ಬೆಳ್ಳಿ ಪದಕ

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಮಾರಿ ಖುಷಿ ಹೆಚ್ ರವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿರುತ್ತದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷವಾಗಿದೆ.

ಕುಮಾರಿ ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆ ಮೈಸೂರು, ಇಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ನಂತರ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ಮುಂದೆ ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿ ಎನ್ನುತ್ತಾರೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಖುಷಿ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago